ನಾಳೆ ಹಾಸನದಲ್ಲಿ ಪ್ರಜ್ವಲ್‍ ನಾಮಪತ್ರ ಸಲ್ಲಿಕೆ

ನಾಳೆ ಹಾಸನದಲ್ಲಿ ಪ್ರಜ್ವಲ್‍ ನಾಮಪತ್ರ ಸಲ್ಲಿಕೆ

ಹಾಸನ, ಮಾ.21, ನ್ಯೂಸ್ ಎಕ್ಸ್ ಪ್ರೆಸ್: ದೇವೇಗೌಡರ ಅಖಾಡದಿಂದ ಇದೀಗ ಮೊಮ್ಮಗ ಪ್ರಜ್ವಲ್‍ ರೇವಣ್ಣ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಶುಭ ಗಳಿಗೆ ನೋಡಿದ್ದು, ನಾಳೆ ಶುಕ್ರವಾರದಂದು ಮಧ್ಯಾಹ್ನ 12.05 ರಿಂದ 1 ಗಂಟೆಯೊಳಗೆ ಪುತ್ರ ಪ್ರಜ್ವಲ್‍ ನಾಮಪತ್ರ ಸಲ್ಲಿಸಲಿದ್ದಾರೆ ಅಂತಾ ಸಚಿವ ಹೆಚ್‍.ಡಿ. ರೇವಣ್ಣ ತಿಳಿಸಿದ್ದಾರೆ. ಇದಕ್ಕೂ ಮುನ್ನ ಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದು ಬಳಿಕ ನಗರದಲ್ಲಿ ಬಹಿರಂಗ ಸಭೆ ನಡೆಸುವುದಾಗಿ ಹೇಳಿದ್ರು.

ಇದೇ ವೇಳೆ ಕಾಂಗ್ರೆಸ್‍-ಜೆಡಿಎಸ್ ಜಂಟಿ ಪ್ರಚಾರ ನಡೆಸುವ ದಿನ ಇನ್ನೂ ನಿಗದಿಯಾಗಿಲ್ಲ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿ ದಿನ ನಿಗದಿಪಡಿಸಲಾಗುವುದು ಎಂದು ರೇವಣ್ಣ ತಿಳಿಸಿದ್ದಾರೆ.
ನಾಳೆ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಈಗಾಗಲೇ ಶೃಂಗೇರಿಗೆ ತೆರಳಿರುವ ಪ್ರಜ್ವಲ್‍, ನಾಮಪತ್ರವನ್ನು ಶಾರದಾಂಬೆಯ ಪಾದದಡಿ ಇಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos