ಚಿಕ್ಕೋಡಿ, ಮಾ.29, ನ್ಯೂಸ್ ಎಕ್ಸ್ ಪ್ರೆಸ್: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಸಂಸದ ಪ್ರಕಾಶ್ ಹುಕ್ಕೇರಿ ಕಿಡಿ ಕಾರಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಕಾಶ್ ಹುಕ್ಕೇರಿ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಕುಮಾರಸ್ವಾಮಿ ಅವರು ಮಂಡ್ಯ ಹಾಗೂ ಹಾಸನಕ್ಕೆ ಮಾತ್ರ ಮೀಸಲಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚಿಕ್ಕೋಡಿ ಹಾಗೂ ಬೆಳಗಾವಿಗೂ ಕೂಡ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಬರಬೇಕು. ತಮ್ಮ ನಾಮಪತ್ರ ಸಲ್ಲಿಕೆಗೆ ಬರುವಂತೆ ಆಹ್ವಾನಿಸಲಾಗಿದೆ. ಆದರೆ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಆ ಭಾಗದತ್ತ ಮಾತ್ರ ಮೀಸಲಾಗಿದ್ದಾರೆ. ನಮ್ಮ ಕಡೆಗೂ ಅವರು ಬರಬೇಕು. ಯಾವಾಗ ಅವರು ಡೇಟ್ ಕೊಡ್ತಾರೋ ಅಂದೆ ನನ್ನ ನಾಮಪತ್ರ ಸಲ್ಲಿಕೆಗೆ ನಿರ್ಧಾರ ಮಾಡಿದ್ದಾಗಿ ಪ್ರಕಾಶ್ ಹುಕ್ಕೇರಿ ತಿಳಿಸಿದ್ದಾರೆ.