ನವದೆಹಲಿ: ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ನಿಧನದಿಂದಾಗಿ ಇಡೀ ದೇಶ ದುಃಖದಲ್ಲಿ ಮುಳುಗಿ ಹೋಗಿದೆ.
ತಂದೆಯ ಮರಣದಿಂದ ಶೋಕಸಾಗರದಲ್ಲಿ ಮುಳುಗಿರುವ ಅವರ ಪುತ್ರಿ ಶರ್ಮಿಷ್ಟ ಮುಖರ್ಜಿ ಭಾವೋದ್ವೇಗದಿಂದ ಟ್ವೀಟ್ ಮಾಡಿದ್ದಾರೆ.
ಎಲ್ಲರಿಗೂ ಧನ್ಯವಾದ ಎಂದು ಟ್ವೀಟ್ ಆರಂಭಿಸಿರುವ ಶರ್ಮಿಷ್ಟ ಅಪ್ಪ ಎಲ್ಲರೂ ನಿಮಗೆ ಅಂತಿಮ ವಿದಾಯ ಸಲ್ಲಿಸಲು ನಿಮ್ಮ ಅಚ್ಚುಮೆಚ್ಚಿನ ಕವಿಯ ಸಾಲುಗಳನ್ನು ಉಲ್ಲೇಖಿಸುವ ಸ್ವತಂತ್ರ ಪಡೆದುಕೊಳ್ಳುತ್ತೇನೆ.