ಮಾ. 5, ನ್ಯೂಸ್ ಎಕ್ಸ್ ಪ್ರೆಸ್,ಬೆಂಗಳೂರು : ಪೊಲೀಸ್ ಪೇದೆ ಪ್ರಶ್ನೆ ಪತ್ರಿಕೆ ಸೋರಿಕೆಯ ಪ್ರಮುಖ ಆದ ಶಿವಕುಮಾರ್ ಗೆ ಸಿಸಿಬಿ ಶಾಕ್ ನೀಡಿದ್ದು, ಶಿವಕುಮಾರ್ ವಿರುದ್ಧ ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲು ಸಿಸಿಬಿ ಮುಂದಾಗಿದೆ.
ಪಿಎಸ್ ಐ ಸೇರಿದಂತೆ ಇನ್ನು ಹಲವಾರು ಪ್ರಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಶಿವಕುಮಾರ್ ಇತ್ತೀಚೆಗಷ್ಟೇ ಜಾಮೀನು ಪಡೆದುಕೊಂಡಿದ್ದರು. ಆದರೆ, ಈತ ಹೊರ ಬಂದರೆ ಮತ್ತೆ ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆ ಈತನ ಮೇಲೆ ಕಣ್ಣಿಟ್ಟಿದ್ದ ಸಿಸಿಬಿ ಪೊಲೀಸರು ಈಗ ಕೋಕಾ ಕಾಯ್ದೆ ದಾಖಲಿಸಲು ಮುಂದಾಗಿದ್ದಾರೆ.
ಪಿಎಸ್ ಐ, ಪೊಲೀಸ್ ಕಾನ್ಸ್ ಟೇಬಲ್ ಪ್ರಶ್ನೆ ಪತ್ರಿಕೆ ಮಾತ್ರವಲ್ಲದೇ, ಮಹಾಲಕ್ಷ್ಮೀ ಲೇಔಟ್ ಠಾಣೆ ಮೆಡಿಕಲ್ ಸೀಟ್, ಜ್ಞಾನ ಭಾರತಿ ಠಾಣೆ ವಂಚನೆ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ. ಈ ಪ್ರಕರಣದ ಆಧಾರದ ಮೇಲೆ ಪೊಲೀಸರು ಈಗ ಕೋಕಾ ಕಾಯ್ದೆ ದಾಖಲಿಸಲು ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದೆ.