ಮೈಸೂರು ಕ್ಷೇತ್ರದಲ್ಲಿ ಮೂರನೇ ಬಾರಿಯೂ ಬಿಜೆಪಿ ಗೆಲ್ಲಾಬೇಕು: ಪ್ರತಾಪ್ ಸಿಂಹ

ಮೈಸೂರು ಕ್ಷೇತ್ರದಲ್ಲಿ ಮೂರನೇ ಬಾರಿಯೂ ಬಿಜೆಪಿ ಗೆಲ್ಲಾಬೇಕು: ಪ್ರತಾಪ್ ಸಿಂಹ

ಮೈಸೂರು: ಲೋಕಸಭಾ ಚುನಾವಣೆ ಹತ್ತಿರಕ್ಕೆ ಬರುತ್ತಿದೆ. ಕರ್ನಾಟಕದ ಹಾಲಿ ಬಿಜೆಪಿ ಸಂಸದರು ಟಿಕೆಟ್‌ ಸಿಗುವ ನಿರೀಕ್ಷೆಯಿಂದಾಗಿ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಮುಂದುವರೆಸುತ್ತಿದ್ದಾರೆ. ಆದರೆ, ಈ ಬಾರಿ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಸಂಸದ ಪ್ರತಾಪ ಸಿಂಹ ಬದಲು ಯದುವೀರ್‌ ಒಡೆಯರ್ ಅವರಿಗೆ ಟಿಕೆಟ್‌ ಸಿಕ್ಕಿರುವುದು.

ದೇಶಕ್ಕೆ ಮೋದಿ ಬೇಕು, ಮೈಸೂರಿಗೆ ಯದುವೀರ್ ಬೇಕು. ಹಾಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಯದುವೀರ್ ಅವರಿಗೆ ಮತ ಹಾಕಿ ಗೆಲ್ಲಿಸುವಂತೆ ಸಂಸದ ಪ್ರತಾಪ ಸಿಂಹ ಮನವಿ ಮಾಡಿದ್ದಾರೆ.

ಮಂಗಳವಾರ ಹಿಂದುಳಿದ ವರ್ಗಗಳ ಸಮ್ಮೇಳನದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಮೂರನೇ ಬಾರಿಯೂ ಬಿಜೆಪಿ ಗೆದ್ದರೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ಖಚಿತ. ಈಗಾಗಲೇ ನಾವು ಇಲ್ಲಿ ಸತತ ಎರಡು ಬಾರಿ ಗೆದ್ದಿದ್ದೇವೆ ಎಂದು ಹೇಳಿದರು.

ಮೈಸೂರು ಸಂಸ್ಥಾನದ ಕೊಡುಗೆ ಸದಾ ನಮ್ಮ ಮುಂದೆ ಇದೆ. ಮೀಸಲಾತಿಯನ್ನು ಸಾಕಷ್ಟು ಕಾಲಗಳ ಹಿಂದೆಯೇ ಜಾರಿಗೆ ತಂದವರು ನಮ್ಮ ಮೈಸೂರಿನ ಮಹಾರಾಜರು. ದೇಶದ 7ನೇ ಮೆಡಿಕಲ್ ಕಾಲೇಜು ಮೈಸೂರಿನಲ್ಲಿದ್ದು 100ನೇ ವರ್ಷ ಪೂರೈಸುತ್ತಿದೆ. ಪ್ರಧಾನಿ ಮೋದಿ ಕೂಡ ಮೈಸೂರಿನ ಮಹಾರಾಜರ ಪರಂಪರೆಗೆ ಅನುಗುಣವಾಗಿ ಮುನ್ನಡೆಯುತ್ತಿದ್ದಾರೆ ಎಂದು ತಿಳಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos