ಪ್ರತಾಪ್ ಸಿಂಹ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಪ್ರತಾಪ್ ಸಿಂಹ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಮೈಸೂರು, ಮೇ. 23, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಮೈಸೂರು – ಕೊಡಗು ಕ್ಷೇತ್ರದಲ್ಲಿ ಗೆಲುವಿನ ಸನಿಹದಲ್ಲಿರುವ ಪ್ರತಾಪ್ ಸಿಂಹರ ಹೆಸರಿನಲ್ಲಿ ಕಾರ್ಯಕರ್ತರು ಜಯಕಾರ ಹಾಕುತ್ತಿದ್ದಾರೆ. ಮೈಸೂರಿನ ಬಿಜೆಪಿ ಕಚೇರಿ ಸೇರಿದಂತೆ ಹಲವೆಡೆ ಪ್ರತಾಪ್ ಸಿಂಹ ಅವರ ಗೆಲುವನ್ನು ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಈಗಾಗಲೇ 90 ಸಾವಿರ ಮತದ ಅಂತರವಿರುವ ಸಂಸದ ಪ್ರತಾಪ್ ಸಿಂಹರವರು ಮೈತ್ರಿ ಅಭ್ಯರ್ಥಿ ಸಿ.ಹೆಚ್ ವಿಜಯಶಂಕರ್ ರವರನ್ನು ಹಿಂದಿಕ್ಕಿದ್ದಾರೆ. ಸಂಜೆ ವೇಳೆಗೆ ಫಲಿತಾಂಶ ಏನು ಎಂಬುದು ಸ್ಪಷ್ಟವಾಗಿ ತಿಳಿಯಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos