ಪೊಲೀಸರ ಮೇಲೆ ಮೋದಿ ತಮ್ಮ ಸಿಟ್ಟಾಗಿದ್ಯಾಕೆ?

ಪೊಲೀಸರ ಮೇಲೆ ಮೋದಿ ತಮ್ಮ ಸಿಟ್ಟಾಗಿದ್ಯಾಕೆ?

ರಾಜಸ್ಥಾನ, ಮೇ.15, ನ್ಯೂಸ್‍ ಎಕ್ಸ್ ಪ್ರೆಸ್‍: ಮೋದಿ ಸಹೋದರ ರಾಜಸ್ಥಾನ, ಜೈಪುರ್ ನ ಬಾಗ್ರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಜೈಪುರದಿಂದ ತೆರಳುತ್ತಿದ್ದ ಮೋದಿ ಸಹೋದರ ಪ್ರಹ್ಲಾದ್ ಮೋದಿ ಅವರ ರಕ್ಷಣೆಗಾಗಿ ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿತ್ತು. ಆದರೆ ಅವರಿಗೆ ಪ್ರತ್ಯೇಕ ವಾಹನ ವ್ಯವಸ್ಥೆ ಮಾಡದೇ, ಪ್ರಹ್ಲಾದ್ ಮೋದಿ ಅವರ ವಾಹನದಲ್ಲೇ ಕಳುಹಿಸಿ ಕೊಡುವ ವ್ಯವಸ್ಥೆ ಮಾಡಲಾಗಿತ್ತು. ಇದ್ರಿಂದ ಸಿಟ್ಟಿಗೆದ್ದ ಮೋದಿ ಸಹೋದರ್ ಪ್ರಹ್ಲಾದ್‍ ಮೋದಿ ತಮ್ಮ ರಕ್ಷಣೆಗಿರುವ ಪೊಲೀಸರಿಗೆ ಪ್ರತ್ಯೇಕ ವಾಹನ ನೀಡುವಂತೆ ಧರಣಿ ನಡೆಸಿದ್ರು.

ಬಳಿಕ ನಿಯಮದಂತೆ ಇಬ್ಬರು ಭದ್ರತಾ ಸಿಬ್ಬಂದಿಯನ್ನು ವಿಐಪಿ ಕಾರಿನಲ್ಲೇ ಕಳುಹಿಸಬೇಕಾದ ಅನಿವಾರ್ಯತೆನ್ನು ಜೈಪುರ್ ಪೊಲೀಸ್ ಕಮಿಷನರ್ ಆನಂದ್ ಶ್ರೀವಾತ್ಸವ್ ಮನವರಿಕೆ ಕೊಟ್ಟಿದ್ದಾರೆ. ಬಳಿಕ ಧರಣಿ ಕೈಬಿಟ್ಟ ಪ್ರಹ್ಲಾದ್ ಮೋದಿ ಬಳಿಕ ಇಬ್ಬರು ಭದ್ರತಾ ಸಿಬ್ಬಂದಿಯೊಂದಿಗೆ ತಮ್ಮದೇ ಕಾರಿನಲ್ಲಿ ತೆರಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos