ಗುವಾಹಟಿ, ಜು. 12 : ಇಂದು ಅಸ್ಸಾಂ, ಪಶ್ಚಿಮ ಬಂಗಾಳ, ಮಿಜೋರಾಂನಲ್ಲಿ ಭಾರೀ ಮಳೆಯಾಗುತ್ತಿದ್ದು ಪ್ರವಾಹ ಉಂಟಾಗಿದೆ. ಅಸ್ಸಾಂನಲ್ಲಿ ಪ್ರವಾಹದ ಮಟ್ಟದಲ್ಲಿ ಏರಿಕೆಯಾಗಿದ್ದು, 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು 4 ಲಕ್ಷ ಜನರು ಪೀಡಿತರಾಗಿದ್ದು, ಮೂವರು ಪ್ರಾಣಕಳೆದು ಕೊಂಡಿದ್ದಾರೆ.
ಹಲವೆಡೆ ಭೂಕುಸಿತಗಳು ಸಂಭವಿಸಿದ್ದು, ಮನೆಗಳು ನೆರೆಯಲ್ಲಿ ಕೊಚ್ಚಿ ಹೋಗಿರುವ ಬಗ್ಗೆ ವರದಿಯಾಗಿದೆ. ಅಪಾರ ಪ್ರಮಾಣದ ಕೃಷಿ ಭೂಮಿ ಜಲಾವೃತವಾಗಿದ್ದು ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.
ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮಳೆ ಮುಂದುವರಿದಲ್ಲಿ ಅಪಾಯ ಮಟ್ಟವನ್ನು ಮೀರಲಿದೆ ಎಂದು ಒಳನಾಡು ಜಲಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.