ಪ್ರವಾಹಕ್ಕೆ ಮೃತರ ಸಂಖ್ಯೆ 102 ಏರಿಕೆ

ಪ್ರವಾಹಕ್ಕೆ ಮೃತರ ಸಂಖ್ಯೆ 102 ಏರಿಕೆ

ನವದೆಹಲಿ, ಆ. 15 : ಕೇರಳದಲ್ಲಿ ಮಳೆ, ಪ್ರವಾಹಕ್ಕೆ ಅಸುನೀಗಿದವರ ಸಂಖ್ಯೆ 102ಕ್ಕೆ ಏರಿಕೆಯಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗು ತ್ತಿದೆ. ಮಲಪ್ಪುರಂ, ಕಣ್ಣೂರು, ಕಲ್ಲಿಕೋಟೆ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿ ಸಲಾಗಿದೆ. ತೀರ ಪ್ರದೇಶದ ವ್ಯಾಪ್ತಿಯಲ್ಲಿರುವ ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ತೆರಳದಂತೆಯೂ ಎಚ್ಚರಿಕೆ ನೀಡಲಾಗಿದೆ. ಕಣ್ಣೂರು ವಿವಿ ವ್ಯಾಪ್ತಿಯಲ್ಲಿನ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ.
ತಿರುವನಂತಪುರದಲ್ಲಿ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತತ್ಕ್ಷಣದ ಪರಿಹಾರವಾಗಿ ಸಂತ್ರಸ್ತರಿಗೆ ತಲಾ 10 ಸಾವಿರ ರೂ. ನೀಡಲಾಗುತ್ತದೆ. ಮನೆ ಮತ್ತು ಜಮೀನು ಕಳೆದುಕೊಂಡವರಿಗೆ 10 ಲಕ್ಷ, ಮನೆ ಕಳೆದುಕೊಂಡವರಿಗೆ 4 ಲಕ್ಷ ರೂ. ನೀಡಲು ನಿರ್ಧರಿಸಲಾಗಿದೆ ಎಂದರು. 1.95 ಲಕ್ಷ ಮಂದಿ 1,118 ನಿರಾಶ್ರಿತರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos