ಹಾಸನ, ಮೇ. 15, ನ್ಯೂಸ್ ಎಕ್ಸ್ ಪ್ರೆಸ್: ಹಾಸನ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಶುರುವಾಗಿದೆ. ಫಲಿತಾಂಶಕ್ಕೆ ಮುಂಚೆ ಪ್ರಜ್ವಲ್ ರೇವಣ್ಣ ಅಫಿಡವಿಟ್ ವಿವಾದ ಜಿಲ್ಲಾಧಿಕಾರಿ ಅಂಗಳ ತಲುಪಿದೆ. ಹಾಸನದಲ್ಲಿ ಗೆದ್ದೇ ಗೆಲ್ತೀನಿ ಅಂತ ಆತ್ಮವಿಶ್ವಾಸದಲ್ಲಿದ್ದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ಪಾಳಯಕ್ಕೆ ಹೊಸ ಅಗ್ನಿಪರೀಕ್ಷೆ ಶುರುವಾಗಿದೆ.
ಬಿಜೆಪಿ ಅಭ್ಯರ್ಥಿ ಎ. ಮಂಜು ಹಾಗೂ ವಕೀಲ ದೇವರಾಜೇಗೌಡ ಜಿಲ್ಲಾಧಿಕಾರಿಗೆ ಮತ್ತು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಪ್ರಜಾಪ್ರತಿನಿಧಿ ಕಾಯಿದೆ ಅನ್ವಯ ಕ್ರಮಕ್ಕೆ ದೂರು ದಾಖಲಿಸಿದ್ದರು. ಅಫಿಡವಿಟ್ ನಲ್ಲಿ ಸುಳ್ಳು ಮಾಹಿತಿ ನೀಡಿರುವ ಕುರಿತು ತನಿಖೆ ನಡೆಸಿದ ಚುನಾವಣಾ ಆಯೋಗ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಸನ ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ. ಚುನಾವಣಾ ಆಯೋಗದ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಕ್ರಮ ಕೈಗೊಳ್ತಾರಾ?
ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ಅಭ್ಯರ್ಥಿ ಎ. ಮಂಜು ಸುಳ್ಳು ಮಾಹಿತಿ ಗಂಭೀರ ಪ್ರಕರಣವಾಗಿದ್ದು, ಕ್ರಮ ಕೈಗೊಳ್ಳಲೇಬೇಕು. ಇಲ್ಲದ್ದಿದ್ದಲ್ಲಿ ಹೈಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ