ಆಯವ್ಯಯ ಮಂಡನೆ ಸಂಬಂಧ ಸಚಿವರೊಂದಿಗೆ ಪೂರ್ವಭಾವಿ ಸಭೆ: ಡಿಸಿಎಂ ಪರಮೇಶ್ವರ

ಆಯವ್ಯಯ ಮಂಡನೆ ಸಂಬಂಧ ಸಚಿವರೊಂದಿಗೆ ಪೂರ್ವಭಾವಿ ಸಭೆ: ಡಿಸಿಎಂ ಪರಮೇಶ್ವರ

ಬೆಂಗಳೂರು: 2019-20 ನೇ ಸಾಲಿನ ಆಯವ್ಯಯ ಮಂಡನೆ ಸಂಬಂಧ ಎಲ್ಲ ಕಾಂಗ್ರೆಸ್‌ ಸಚಿವರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಇಲಾಖಾವಾರು ಚರ್ಚೆ ನಡೆಸಲಾಯಿತು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.

ಇಂದು ಅಶೋಕ್ ಹೋಟೆಲ್‌ನಲ್ಲಿ ಕರೆದಿದ್ದ ಕಾಂಗ್ರೆಸ್‌ನ ಎಲ್ಲಾ ಸಚಿವರ ಸಭೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಫೆಬ್ರವರಿಯ ಮೊದಲ ವಾರದಲ್ಲಿ ಬಜೆಟ್‌ ಮಂಡನೆ ಮಾಡಲು‌ ಹಣಕಾಸು ಸಚಿವ, ಮುಖ್ಯಮಂತ್ರಿಗಳು ತೀರ್ಮಾನಿಸಿದ್ದಾರೆ. ಹೀಗಾಗಿ ಇಲಾಖಾವಾರು ಚರ್ಚಿಸಲು ಎಲ್ಲ ಸಚಿವರನ್ನು ಇಂದು ಸಭೆಗೆ ಆಹ್ವಾನಿಸಿದ್ದೆ. ಸಮ್ಮಿಶ್ರ ಸರಕಾರದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷವು ಪ್ರತ್ಯೇಕವಾಗಿ ಪ್ರಣಾಳಿಕೆಯನ್ನು ಹೊರಡಿಸಲಾಗಿದೆ. ಅಂತೆಯೇ ಈ ಎರಡೂ ಪ್ರಣಾಳಿಕೆಯಲ್ಲಿರುವ ಪ್ರಮುಖ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲು ನಿರ್ಧರಿಸಲಾಗಿತ್ತು ಎಂದು ಸ್ಪಷ್ಟಪಡಿಸಿದರು.

ಕಳೆದ ಬಾರಿ ಸಿದ್ದರಾಮಯ್ಯ ಅವರ ಸರಕಾರದ ಆಯವ್ಯಯದಲ್ಲಿ ಘೋಷಿಸಿದ್ದ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ. ಈ ಬಜೆಟ್‌ನಲ್ಲಿ ಕಾಂಗ್ರೆಸ್‌ ತತ್ವ ಸಿದ್ಧಾಂತವನ್ನು ಗಮನದಲ್ಲಿಟ್ಟುಕೊಂಡು ಆದ್ಯತೆ ಮೇರೆಗೆ ಪ್ರಮುಖ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುತ್ತದೆ. ಕಳೆದ ಬಾರಿ ಸಿದ್ದರಾಮಯ್ಯ ಅವರ ಸರಕಾರದಲ್ಲಿ ಘೋಷಿಸಿ, ಇನ್ನೂ ಜಾರಿಗೆ ಬಾರದ ಕಾರ್ಯಕ್ರಮಗಳನ್ನು ಸಹ ಅನುಷ್ಠಾನ ಮಾಡಲಾಗುತ್ತದೆ. ಸಾಲಮನ್ನಾ ಘೊಷಿಸಿರುವುದರಿಂದ ಅದಕ್ಕೆ ಇಂತಿಷ್ಠು ಹಣ ಮೀಸಲಿರಿಸಲಾಗುವುದು ಎಂದರು.

ಇತರೆ ಪ್ರಮುಖ ಕಾರ್ಯಕ್ರಮಗಳ ಪಟ್ಟಿ ನೀಡುವಂತೆಯೂ ಇಲಾಖಾವಾರು ಸಚಿವರುಗಳಿಗೆ ಸೂಚನೆ ನೀಡಲಾಗಿದೆ. ಇಂದು ಚರ್ಚಿಸಿದ ಅಂಶಗಳನ್ನು ಹಾಗೂ ಸಚಿವರ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರುವ ಕೆಲಸವನ್ನು ನಾನು ಮಾಡಲಿದ್ದೇನೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos