ಮುಂಬೈ, ನ. 12 : ಹಗ್ಗಜಗ್ಗಾಟಕ್ಕೆ ಸಾಕ್ಷಿಯಾಗುತ್ತಿರುವ ಮಹಾರಾಷ್ಟ್ರದಲ್ಲಿ ಕ್ಷಣಕ್ಷಣಕ್ಕೂ ರಾಜಕೀಯ ಹೈಡ್ರಾಮಾ ನಡೆಯುತ್ತಿದ್ದು, ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದಾರೆ. ಮಂಗಳವಾರ ರಾತ್ರಿ 8.30ರ ಒಳಗೆ ಶಾಸಕರ ಬೆಂಬಲ ಪತ್ರವನ್ನು ನೀಡುವಂತೆ ರಾಜ್ಯಪಾಲರು ಸೂಚಿಸಿದ್ದರು.
ಕೇಂದ್ರದ ಅಂಗಳಕ್ಕೆ ಚೆಂಡು ತಲುಪಿದೆ. ಮಹಾರಾಷ್ಟ್ರದಲ್ಲಿ ಅಧಿಕಾರ ರಚನೆ ವಿಫಲವಾದ ಹಿನ್ನೆಲೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಲಾಗಿದೆ. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಲೇರಲು ಉದವ್ ಠಾಕ್ರೆ ಅವರು ಕಪಿಲ್ ಸಿಬಲ್ ಮತ್ತು ಅಹ್ಮದ್ ಪಟೇಲ್ ಅವರೊಂದಿಗೆ ಈಗಾಗಲೇ ಚರ್ಚೆ ನಡೆಸಿದ್ದಾರೆ.