ಮೋದಿಗೆ ಮಾಂಗಲ್ಯದ ಬೆಲೆ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ

ಮೋದಿಗೆ ಮಾಂಗಲ್ಯದ ಬೆಲೆ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ

ಬೆಂಗಳೂರು: ರಾಜ್ಯ ರಾಜ್ಯಸಭಾ ಚುನಾವಣಾ ಅಖಾಡಕ್ಕೆ ನಿನ್ನೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರವೇಶ ಮಾಡಲಿದ್ದು, ಕರ್ನಾಟಕ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕ ಗಾಂಧಿ ಎಂಟ್ರಿ ಕೊಟ್ಟಿದಾರೆ.

ನಗರದ ಹೆಚ್​ಎಸ್​ಆರ್ ಬಡವಾಣೆಯಲ್ಲಿಂದು ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕ ಗಾಂಧಿ ಅವರು, ”ಕಾಂಗ್ರೆಸ್ ಮಂಗಳಸೂತ್ರ ಕಿತ್ತುಕೊಳ್ಳುತ್ತದೆ ಎಂದು ಮೋದಿ ಹೇಳಿದ್ದಾರೆ. ನನ್ನ ತಾಯಿಯ (ಸೋನಿಯಾ ಗಾಂಧಿ) ಮಂಗಳ ಸೂತ್ರ ದೇಶಕ್ಕಾಗಿ ಬಲಿದಾನವಾಗಿದೆ. ಮಹಿಳೆಯರ ಮನಸ್ಸಲ್ಲಿ ಇರುವ ಸೇವೆಯ ಭಾವನೆ ಬಿಜೆಪಿಗೆ ಅರ್ಥವಾಗುವುದಿಲ್ಲ” ಎಂದು ತಿರುಗೇಟು ನೀಡಿದರು.

”ಇವತ್ತು ಚುನಾವಣೆ ನಡೀತಾ ಇದೆ. ಆದರೆ, ಯಾರೊಬ್ಬರೂ ಸಹ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ. ಪ್ರಧಾನಿ ಅವರ ಫೋಟೋ ಇಟ್ಟುಕೊಂಡು ಮತ ಕೇಳುತ್ತಿದ್ದಾರೆ. ಇವರು ಭಾವನಾತ್ಮಕ ರಾಜಕೀಯ ಮಾಡುತ್ತಿದ್ದಾರೆ. ಬಿಜೆಪಿಗೆ ಹೆಣ್ಣು ಮಕ್ಕಳ ಕಷ್ಟ ಅರ್ಥ ಆಗಲ್ಲ.‌ ರೈತರ ಸಾಲ ಹೆಚ್ಚಾದಾಗ ಆ ಮಹಿಳೆ ಮಾಂಗಲ್ಯ ಅಡ ಇಡುತ್ತಾರೆ. ಮನೆಯಲ್ಲಿ ಯಾರಿಗಾದರೂ ಕಷ್ಟ ಎದುರಾದರೆ ಮಾಂಗಲ್ಯ ಅಡ ಇಡುತ್ತಾಳೆ. ದೇಶದಲ್ಲಿ ಲಾಕ್ ಡೌನ್ ಆದಾಗ ಬಡವರಿಗೆ ಊಟ ಸಿಗಲಿಲ್ಲ. ಎಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

”ನಿಮ್ಮೆಲ್ಲರ ಮುಂದೆ ಸೂಪರ್ ಮ್ಯಾನ್ ಥರ ಮೋದಿ ಬಂದು ನಿಂತಿದ್ದರು. ಆದರೆ, ನಿಮ್ಮ ಜೀವನದಲ್ಲಿ ಬದಲಾವಣೆ ಆಗಿದ್ಯಾ ಅನ್ನೋ ಪ್ರಶ್ನೆ ಮಾಡಬೇಕಿದೆ. ನಿರುದ್ಯೋಗ ಸಮಸ್ಯೆ ಎಲ್ಲರನ್ನೂ ಕಾಡುತ್ತಿದೆ. ಪ್ರಧಾನಿ ಮೋದಿಯವರ 10 ವರ್ಷ ಆಡಳಿತ ನೋಡಿದ್ದೀರಿ. ಆದರೆ, ನಿಮ್ಮ ಜೀವನದಲ್ಲಿ ಬದಲಾವಣೆ ಆಗಿದ್ಯಾ.. ಎಂದು ಹೇಳಿದರು.

”ನಾವು ಕೆಲವು ತಿಂಗಳ ಹಿಂದೆ ಬಂದು ಮಾತನಾಡಿದ್ದೆ, ಆ ನಂತರ ರಾಜ್ಯದಲ್ಲಿ ಸರ್ಕಾರ ಅಧಿಕಾರಿಕ್ಕೆ ಬಂದಿದೆ. ಸರ್ಕಾರದಿಂದ ಬಹಳ ಖುಷಿಯಾಗಿದೆ. ಗೃಹ ಲಕ್ಷ್ಮಿ ಯೋಜನೆಯಿಂದ 2 ಸಾವಿರ ರೂಪಾಯಿ ಸಿಗುತ್ತಿರುವುದು ನನಗೆ ಖುಷಿಯಾಗಿದೆ. 200 ಯುನಿಟ್ ವಿದ್ಯುತ್ ಉಚಿತ ಸಿಗುತ್ತಿದೆ. ಅನ್ನಭಾಗ್ಯ ಯೋಜನೆಯಿಂದ ನಾಲ್ಕು ಕೋಟಿ ಜನಕ್ಕೆ ಅನುಕೂಲ ಆಗುತ್ತಿದೆ. ಶಕ್ತಿ ಯೊಜನೆಯಿಂದ ಬಸ್​ನಲ್ಲಿ ಉಚಿತ ಪ್ರಯಾಣ ಸಿಕ್ಕಿದೆ. ಯುವನಿಧಿಯಿಂದ ಯುವಕರಿಗೆ ಹಣ ಸಿಗುತ್ತಿದೆ. ದೇಶಾದ್ಯಂತ ನುಡಿದಂತೆ ನಡೆಯುವ ಸರ್ಕಾರ ಇದ್ದರೆ, ಅದು ಕಾಂಗ್ರೆಸ್ ಮಾತ್ರ. ಅದರಂತೆ ಕರ್ನಾಟದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ” ಎಂದು ಪ್ರಿಯಾಂಕಾ ಹೇಳಿದರು.

 

ಫ್ರೆಶ್ ನ್ಯೂಸ್

Latest Posts

Featured Videos