ರಾಯಬರೇಲಿ, ಮಾ.29, ನ್ಯೂಸ್ ಎಕ್ಸ್ ಪ್ರೆಸ್: ನಾನ್ಯಾಕೆ ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಬಾರದು ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ. ಪ್ರಶ್ನೆ ಮಾಡಿದ್ದಾರೆ.
ಪಕ್ಷದ ಕಾರ್ಯಕರ್ತರು, ಗ್ರಾಮ ಪಂಚಾಯಿತಿ, ನಗರ ಪಂಚಾಯಿತಿ ಮುಖಂಡರು ರಾಯಬರೇಲಿಯಲ್ಲಿ ನಡೆದ ಸಭೆಯಲ್ಲಿ ತಾಯಿ ಸೋನಿಯಾ ಗಾಂಧಿ ಅವರ ಕ್ಷೇತ್ರ ರಾಯಬರೇಲಿಯಿಂದ ಸ್ಪರ್ಧಿಸುವಂತೆ ಒತ್ತಾಯಿಸಿದರು.
ಆಗ ಪ್ರತಿಕ್ರಿಯಿಸಿದ ಪ್ರಿಯಾಂಕಾ, ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರ ವಾರಾಣಸಿಯಿಂದ ನಾನು ಯಾಕೆ ಸ್ಪರ್ಧಿಸಬಾರದು ಎಂದು ಕೇಳಿದರು.