ತಾಕತ್ತಿದ್ದರೆ ಚಿಂಚೋಳಿ ಬೈಎಲೆಕ್ಷನ್ಗೆ ನಿಲ್ಲಿ; ಸಚಿವ ಪ್ರಿಯಾಂಕ್ ಖರ್ಗೆಗೆ ಉಮೇಶ್ ಜಾದವ್ ಸವಾಲು

ತಾಕತ್ತಿದ್ದರೆ ಚಿಂಚೋಳಿ ಬೈಎಲೆಕ್ಷನ್ಗೆ ನಿಲ್ಲಿ; ಸಚಿವ ಪ್ರಿಯಾಂಕ್ ಖರ್ಗೆಗೆ ಉಮೇಶ್ ಜಾದವ್ ಸವಾಲು

ಕಲಬುರಗಿ, ಮಾ.13 ನ್ಯೂಸ್ ಎಕ್ಸ್ ಪ್ರೆಸ್:  ತಾಕತ್ತಿದ್ದರೆ ಮುಂಬರುವ ಚಿಂಚೋಳಿ ಬೈ ಎಲೆಕ್ಷನ್‍ಗೆ ಪ್ರಿಯಾಂಕ್ ನಿಲ್ಲಲಿ. ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ. ಒಂದು ಕೈ ನೋಡಿಯೇ ಬಿಡೋಣ ಎಂದು ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಶಾಸಕ ಉಮೇಶ್ ಜಾಧವ್ ಅವರು ಲು ಹಾಕಿದ್ದಾರೆ.

ಮುಂಬರುವ ಬೈ ಎಲೆಕ್ಷನ್‍ನಲ್ಲಿ ಚಿಂಚೊಳ್ಳಿ ಕ್ಷೇತ್ರದಿಂದ ಪ್ರಿಯಾಂಕ್ ನಿಂತು ಗೆಲ್ಲಲಿ ಎಂದು ಬಹಿರಂಗವಾಗಿ ಸವಾಲ್ ಹಾಕಿದ್ದಾರೆ. ದತ್ತು ಪುತ್ರನಾಗಿ ಚಿಂಚೋಳಿಗೆ ಬರಲು ಸಿದ್ಧವೆಂಬ ಸಚಿವ ಪ್ರೀಯಾಂಕ್ ಖರ್ಗೆ ಹೇಳಿಕೆ ವಿಚಾರ ಪ್ರತಿಕ್ರಿಯಿಸಿ, ದತ್ತು ಪುತ್ರನಾಗಿ ಬರುವ ಬದಲು ರಾಜನಾಗಿ ಬರಲಿ. ಮುಂಬರುವ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ, ಒಂದು ಕೈ ನೋಡಿಯೇ ಬಿಡೋಣ ಎಂದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos