ಪ್ರೋ.ಭಗವಾನ್ ಗೆ ಲಘು ಹೃದಯಾಘಾತ..!

ಪ್ರೋ.ಭಗವಾನ್ ಗೆ ಲಘು ಹೃದಯಾಘಾತ..!

ಮೈಸೂರು, ಮೇ. 18, ನ್ಯೂಸ್ ಎಕ್ಸ್ ಪ್ರೆಸ್ :  ಚಿಂತಕ, ಸಾಹಿತಿ ಪ್ರೊ.ಕೆ.ಎಸ್‌.ಭಗವಾನ್‌ ಅವರಿಗೆ ಲಘು ಹೃದಯಾಘಾತವಾಗಿದ್ದು, ರಾಮಕೃಷ್ಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ತಮ್ಮ ಮನೆಯಿಂದ ಎಂದಿನಂತೆ ಶುಕ್ರವಾರ ಸಂಜೆ ವಾಯು ವಿಹಾರಕ್ಕೆ ತೆರಳಿದ್ದ ಭಗವಾನ್‌ ಲಘು ಹೃದಯಾಘಾತದಿಂದಾಗಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.  ಇದನ್ನು ಗಮನಿಸಿದ ಅವರೊಂದಿಗೆ ಇದ್ದ ಪೊಲೀಸ್‌ ಇಲಾಖೆಯ ಅಂಗರಕ್ಷಕ ಅವರನ್ನು ಸಾರ್ವಜನಿಕರ ನೆರವಿನೊಂದಿಗೆ ಆಸ್ಪತ್ರೆಗೆ ದಾಖಲಿಸಿದರು. ”ಭಗವಾನ್‌ ಅವರಿಗೆ ಲಘು ಹೃದಯಾಘಾತವಾಗಿತ್ತು. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ,” ಎಂದು ವೈದ್ಯರು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos