ಮಾದಪ್ಪನ ದರ್ಶನ ನಿಷೇಧ

ಮಾದಪ್ಪನ ದರ್ಶನ ನಿಷೇಧ

ಹನೂರು: ಪ್ರಸಿದ್ಧ ಯಾತ್ರ ಸ್ಥಳವಾದ ಶ್ರೀ ಮಹದೇಶ್ವರ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಮತ್ತು ಭಕ್ತರಿಗೆ ದೇವರ ದರ್ಶನಕ್ಕೆ ಅನುಮತಿಯನ್ನು ರದ್ದುಮಾಡಲಾಗಿದ್ದು, ಭಕ್ತರು ಸಹಕರಿಸುವಂತೆ ಪ್ಕಟಣೆಯಲ್ಲಿ ತಿಳಿಸಲಾಗಿದೆ
ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಶ್ರೀ ಸ್ವಾಮಿಯವರ ದರ್ಶನವನ್ನು ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ಕೊರೋನಾ ವೈರಸ್ ರೋಗ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ೧೪ರಿಂದ ೧೭ಹಾಗು ೨೪ರಿಂ ೨೭ ರವರೆಗೆ ಸಾರ್ವಜನಿಕರಿಗೆ ಮತ್ತು ಭಕ್ತರಿಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಜಿಲ್ಲಾಧಿಕಾರಿಗಳ ಆದೇಶದಂತೆ ಕಾರ್ಯದರ್ಶಿ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮ ಬೆಟ್ಟ ಹನೂರು ತಾಲ್ಲೂಕು ಇವರು ಕೇವಲ ಸ್ಥಳೀಯ ಸಂಪ್ರದಾಯದಂತೆ ಎಣ್ಣೆ ಮಜ್ಜನ ಸೇವೆ ಮತ್ತು ಅಮವಾಸ್ಯೆ ಪೂಜೆ ಮತ್ತು ಅಯುಧಪೂಜೆ, ವಿಜಯದಶಮಿ ಪ್ರಯುಕ್ತ ಪೂಜೆ ಮಾಡಲಾಗುವುದು ಭಕ್ತಾದಿಗಳು ಸಹಕರಿಸಬೇಕಾಗಿ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos