ಇಂದು ಬಿಜೆಪಿ ವಿರುದ್ಧ ಪ್ರತಿಭಟನೆ!

ಇಂದು ಬಿಜೆಪಿ ವಿರುದ್ಧ ಪ್ರತಿಭಟನೆ!

ಬೆಂಗಳೂರು, ಸೆ. 26: ಕಾಂಗ್ರೆಸ್ ಮುಖಂಡರಾದ ರಾಮಲಿಂಗ ರೆಡ್ಡಿ ಅವರು ಇಂದು ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಹೌದು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದಿ ಸರ್ಕಾರದ ಅವಧಿಯಲ್ಲಿದ್ದ ಅನುದಾನ ಕಡಿತ ಮಾಡಲಾಗಿದೆ ಎಂದು ರಾಮಲಿಂಗ ಅರೋಪಿಸಿದ್ದಾರೆ.

ಬಿಟಿಎಂ ಲೇಔಟ್ ಕ್ಷೇತ್ರಕ್ಕೆ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಸಿಕ್ಕ ಅನುದಾನವನ್ನು ಬಿಜೆಪಿ ಸರ್ಕಾರ ಕಡಿತ ಮಾಡಿದೆ ಎಂದು ಆರೋಪಿಸಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್ ಮುಂಭಾಗ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಇನ್ನು ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು, ಪಾಲಿಕೆ ಸದಸ್ಯರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos