ಮಂಗಳೂರು: ಕೇಂದ್ರ ಸರಕಾರದ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ಸಮೂದೆಯನ್ನು ವಿರೋಧಿ ಗುರುವಾರ ಮಂಗಳೂರಿನಲ್ಲಿ ಮಂಗಳಮುಖಿಯರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಮಂಗಳಮುಖಿಯರು ಕೇಂದ್ರ ಸರಕಾರ ತರುತ್ತಿರುವ ಸಮೂದೆಯು ಮಂಗಳಮುಖಿಯ ಸಮುದಾಯದ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಕೇಂದ್ರ ಸರಕಾರವು ಕೂಡಲೇ ಮಸೂದೆ ಹಿಂಪಡೆಯಬೇಕೆಂದು ಆಗ್ರಹಿಸಿದರು. ಅನಂತರ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.