ಅಡುಗೆ ಅನಿಲ ದರ ಹೆಚ್ಚಳಕ್ಕೆ ಪ್ರತಿಭಟನೆ

ಅಡುಗೆ ಅನಿಲ ದರ ಹೆಚ್ಚಳಕ್ಕೆ ಪ್ರತಿಭಟನೆ

ಬೆಂಗಳೂರು, ಫೆ. 18: ಗ್ಯಾಸ್ ಸಿಲಿಂಡರ್ ಬೆಲೆ ದಿಢೀರ್ ಏರಿಕೆಯಾದ ಹಿನ್ನೆಲೆ ಬೆಂಗಳೂರಿನ ಟೌನ್ಹಾಲ್ ಬಳಿ ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಮತ್ತು ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಟೌನ್ ಹಾಲ್ ಎದುರು ಸಿಲಿಂಡರ್ಗೆ ಅರಿಷಿಣ, ಕುಂಕುಮ ಹಚ್ಚಿ, ಹೂವಿನ ಹಾರ ಹಾಕಿ, ಪುರೋಹಿತರ ಮೂಲಕ ಆರತಿ ಎತ್ತಿಸಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜೊತೆಗೆ ‘ಸ್ಮೃತಿ ಅಕ್ಕಾ ಎಲ್ಲಿದ್ದೀಯಕ್ಕಾ..’ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಒಂದೇ ದಿನದಲ್ಲಿ ಅಡುಗೆ ಅನಿಲ ದರ ಪ್ರತಿ ಸಿಲಿಂಡರ್​ಗೆ 145.5 ರೂ. ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರಿಗೆ ಹೊರೆಯಾಗಿದ್ದು, ಜೀವನ ನಿರ್ವಹಣೆ ದುಸ್ತರವಾಗಿದೆ. ಹಣದುಬ್ಬರ, ದಿನಬಳಕೆ ಸಾಮಗ್ರಿಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಯಿಂದ ತತ್ತರಿಸಿರುವ ಜನರಿಗೆ ಅನಿಲ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos