ಶಾಸಕ ಯತ್ನಾಳ್ ವಿರುದ್ಧ ಪ್ರತಿಭಟನೆ

ಶಾಸಕ ಯತ್ನಾಳ್ ವಿರುದ್ಧ ಪ್ರತಿಭಟನೆ

ಕೋಲಾರ: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಮತ್ತು ಕನ್ನಡಪರ ಹೋರಾಟಗಾರರನ್ನು ರೋಲ್‌ಕಾಲ್ ಎಂದು ಕರೆದಿರುವ ಯತ್ನಾಳ್ ಅವರ ಶಾಸಕ ಸ್ಥಾನ ವಜಾ ಮಾಡಬೇಕೆಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಹೊಸ ಬಸ್ ನಿಲ್ದಾಣದಲ್ಲಿ ಶಾಸಕ ಯತ್ನಾಳ್ ಅವರ ಪ್ರತಿಕೃತಿ ದಹಿಸಿ ಮಾತನಾಡಿದ ಎಂ.ಕೆ.ರಾಘವೇಂದ್ರ, ಮರಾಠ ಅಭಿವೃದ್ಧಿ ನಿಗಮದ ವಿಷಯದಲ್ಲಿ ಕನ್ನಡಿಗರ ವಿರುದ್ಧ ಮಾತನಾಡುತ್ತಿರುವ ಮುಖ್ಯಮಂತ್ರಿ ಮತ್ತು ಬಿಜೆಪಿ ಸರ್ಕಾರದ ನಿಲುವು ಸರಿಯಿಲ್ಲ. ನಾಡದ್ರೋಹಿ ಬಿಜೆಪಿ ಸರ್ಕಾರ ಕನ್ನಡ ವಿರೋಧ ವ್ಯಕ್ತಪಡಿಸುವ ಮೂಲಕ ಭಾಷೆಯನ್ನು ಅವಹೇಳನ ಮಾಡುತ್ತಿದೆ. ಹೀಗಾಗಿ ನಿಗಮವನ್ನು ರದ್ದು ಮಾಡುವ ಮೂಲಕ ಕನ್ನಡಿಗರಿಗೆ ನ್ಯಾಯ ದೊರಕಿಸುವುದರೊಂದಿಗೆ ಶಾಂತಿ ಸ್ಥಾಪನೆ ಮಾಡಬೇಕಿದ್ದು ತಪ್ಪಿದಲ್ಲಿ ಕರವೇ ಕ್ರಾಂತಿ ಮಾಡುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಲಿದೆ ಎಂದು ಹೇಳಿದರು.
ಮರಾಠ ಅಭಿವೃದ್ಧಿ ನಿಗಮ ರಚನೆ ಮಾಡಿ ಕನ್ನಡಿಗರು ಮತ್ತು ಮರಾಠರ ನಡುವೆ ಕಂದಕ ಸೃಷ್ಠಿ ಮಾಡಿರುವ ರಾಜ್ಯ ಸರ್ಕಾರ ಹಾಗೂ ಕನ್ನಡ ಚಳವಳಿಗಾರರನ್ನು ಅಪಮಾನ ಮಾಡಿರುವ ಶಾಸಕ ಯತ್ನಾಳ್ ಅವರಿಗೆ ಕರವೇ ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸಲಿದೆ ಎಂದು ಎಂ.ಕೆ.ರಾಘವೇಂದ್ರ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos