ಬೆಂಗಳೂರು, ಡಿ. 11: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಬಿಜೆಪಿ ನಾಯಕರು ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧಿಕ್ಕಾರ ಕೂಗಿದರು.
ದೇಶದಲ್ಲಿ ಎಲ್ಲರಿಗೂ ಬದುಕುವ ಹಕ್ಕಿದ್ದು, ಆ ಹಕ್ಕನ್ನು ಕಸಿದುಕೊಳ್ಳಬಾರದು. ಬಿಜೆಪಿ ಮುಸಲ್ಮಾನರನ್ನು ಗುರಿಯಾಗಿಸಿಕೊಂಡು ಪೌರತ್ವ ಮಸೂದೆಗೆ ತಿದ್ದಪಡಿ ತಂದಿರುವುದು ಸಂವಿಧಾನ ವಿರೋಧಿ ಕ್ರಮ. ಕೂಡಲೇ ಈ ಕಾಯ್ದೆನ್ನು ವಾಪಸ್ ಪಡೆಯುವಂತೆ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.
ಪೌರತ್ವ ಕಾಯ್ದೆಗೆ ತಿದ್ದುಪಡಿ ತರುವುದು ಸರಿಯಲ್ಲ. ಅಕ್ರಮ ವಲಸಿಗರ ಹೆಸರಿನಲ್ಲಿ ವಂಚನೆ ನಡೆಯುತ್ತಿದ್ದು, ತಿದ್ದುಪಡಿ ಹೆಸರಿನಲ್ಲಿ ಮುಸ್ಲೀಂ ಸಮುದಾಯವನ್ನು ದೇಶದಿಂದ ಹೊರಹಾಕುವ ಪ್ರಯತ್ನ ಮಾಡುತ್ತಿದೆ. ಕೇಂದ್ರದ ಈ ನಡೆ ಸಂವಿಧಾನದ ಮೇಲಿನ ಅಕ್ರಮಣದಂತಿದೆ ಎಂದು ಕಿಡಿಕಾರಿದರು.