ರಾಯಚೂರು, ನ. 21 : ಮೈಮೇಲೆ ಸೆಗಣಿ ಎರಚಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಕುಂಭಕರ್ಣ ಸರಕಾರವನ್ನು ಎಚ್ಚರಿಸಲು ಈಗ ಸೆಗಣಿಯಲ್ಲಿ ಹೊಡೆಯುತ್ತಿದ್ದೇವೆ. ಜಿಲ್ಲೆಯ ಮಾನ್ವಿ ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಜನಶಕ್ತಿ ಕೇಂದ್ರದ ಕಾರ್ಯಕರ್ತರು, ಶಾಶ್ವತ ಕುಡಿಯುವ ನೀರಿನ ಯೋಜನೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸುವುದು, ಶುದ್ಧ ಕುಡಿಯುವ ನೀರು ಪೂರೈಕೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜನಶಕ್ತಿ ಕೇಂದ್ರದ ಕಾರ್ಯಕರ್ತರು ಕಳೆದ 55 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಿದ್ದರು.