ಜಿಲ್ಲಾ ಉಸ್ತುವಾರಿ ಸಚಿವರ ನೇತ್ರತ್ವದಲ್ಲಿ ಸಾರ್ವಜನಿಕ ಸಂಪರ್ಕ ಸಭೆ

ಜಿಲ್ಲಾ ಉಸ್ತುವಾರಿ ಸಚಿವರ ನೇತ್ರತ್ವದಲ್ಲಿ ಸಾರ್ವಜನಿಕ ಸಂಪರ್ಕ ಸಭೆ

ಬೆಂಗಳೂರು ಸೆ,20: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿಯವರ ಸಂಯುಕ್ತ ಆಶ್ರಯ ದಲ್ಲಿ ಇಂದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ ಹೆಚ್.ಮುನಿಯಪ್ಪ ನವರ ನೇತೃತ್ವದಲ್ಲಿ ಇಂದು ಸಾರ್ವಜನಿಕ ಸಂಪರ್ಕ ಸಭೆಯನ್ನು ದೇವನಹಳ್ಳಿಯ ಅಂಬೇಡ್ಕರ್ ಭವನದಲ್ಲಿ ನಡೆಸಲಾಯಿತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರದೇಶದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿದ ಸಚಿವರು ಜಿಲ್ಲೆಯಲ್ಲಿ ಕುಡಿಯುವ ನೀರು ರಸ್ತೆಗಳು ಮತ್ತು ಕಂದಾಯ ಇಲಾಖೆಯಲ್ಲಿ ಕಂಡುಬರುವ ಸಮಸ್ಯಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸೂಚಿಸಿದರು
ಇಂದು ಜಿಲ್ಲೆ ಯಲ್ಲಿ ಸಾರ್ವಜನಿಕರ ಸಮಸ್ಯಗಳನ್ನು ಕುದ್ದಾಗಿ ಮಾನ್ಯ ಸಚಿವರೆ ಆಹ್ವಾಲುಗಳನ್ನು ಸ್ವೀಕರಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ.ಅನುರಾಧ,ತಹಶಿಲ್ದಾರಾದ ಶಿವರಾಜ, ಅಧಿಕಾರಿಗಳು,ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು ‌.

ಫ್ರೆಶ್ ನ್ಯೂಸ್

Latest Posts

Featured Videos