ಬೆಂಗಳೂರು : ನಗರದ ಮಾಗಡಿ ರಸ್ತೆಯ ಗೋಪಾಲಪುರದ ಐದನೇ ಕ್ರಾಸ್ ನಲ್ಲಿನ ಖಾದ್ಯ ತಯಾರಿಕೆ ಘಟಕದಲ್ಲಿ ಬಾಯ್ಲರ್ ಸ್ಪೋಟಗೊಂಡು, ಶುಕ್ರವಾರ ಮತ್ತೊಬ್ಬರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಸ್ಥಳದಲ್ಲೇ ಇಬ್ಬರು ಸಜೀವವಾಗಿ ದಹನಗೊಂಡಿದ್ದರು. ಆ ಬಳಿಕ ಮತ್ತಿಬ್ಬರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಆ. 23ರಂದು ಬಾಯ್ಲರ್ ಸ್ಪೋಟಗೊಂಡಿದ್ದು, ಶುಕ್ರವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶಾಂತಿ ಎಂಬುವರು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.