ನಾನು ಯಾರ ಪರ ಪ್ರಚಾರ ಮಾಡಲ್ಲ: ಪುನೀತ್

ನಾನು ಯಾರ ಪರ ಪ್ರಚಾರ ಮಾಡಲ್ಲ: ಪುನೀತ್

ಬೆಂಗಳೂರು, ಮಾ. 20, ನ್ಯೂಸ್ ಎಕ್ಸ್ ಪ್ರೆಸ್: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರು ಸುಮಲತಾ ಅಂಬರೀಶ್ ಪರವಾಗಿ ಪ್ರಚಾರಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜಕಾರಣದಿಂದ ನಾನು  ತುಂಬಾನೆ ದೂರ ಎಂದರು. ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ನಾನು ಯಾರ ಪರವಾಗಿ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ವತಃ ನನ್ನ ಅತ್ತಿಗೆ ಗೀತಾಶಿವರಾಜ್ ಅವರು ಸ್ಪರ್ಧಿಸಿದ್ದಾಗಲೂ ನಾನು ಪ್ರಚಾರಕ್ಕೆ ಹೋಗಿರಲಿಲ್ಲ.

ಅಪ್ಪಜ್ಜಿ ಅವರು ರಾಜಕೀಯದಿಂದ ದೂರವಿದ್ದರು. ಅವರ ಆದರ್ಶವನ್ನು ನಾನು ಪಾಲಿಸುತ್ತಿದ್ದೇನೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಯಾರೇ ಸ್ಪರ್ಧಿಸಿದರು ಜನರು ಉತ್ತಮರನ್ನು ಆಯ್ಕೆ ಮಾಡುತ್ತಾರೆ.

ನಾನು ಕಲಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ನನಗೆ ರಾಜಕೀಯ ಅಗತ್ಯವಿಲ್ಲ, ಹೀಗಾಗಿ ಈ ಚುನಾವಣೆಯಲ್ಲೂ ನಾನು ಪ್ರಚಾರದಲ್ಲಿ ಭಾಗವಹಿಸಬಾರದು ಎಂದು ನಿರ್ಧರಿಸಿದ್ದೇನೆ.

ದಯವಿಟ್ಟು ಅನ್ಯತಾ ಭಾವಿಸಬೇಡಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos