ಕಲಾವಿದ ಪುಟ್ಟಮಲ್ಲೇಗೌಡ ವಿಧಿವಶ

ಕಲಾವಿದ ಪುಟ್ಟಮಲ್ಲೇಗೌಡ ವಿಧಿವಶ

ಚಾಮರಾಜ ನಗರ, ಜೂನ್.11, ನ್ಯೂಸ್ ಎಕ್ಸ್ ಪ್ರೆಸ್: ಗೊರವರ ಕುಣಿತವನ್ನು ಜಿಲ್ಲೆಯಿಂದ ರಾಜ್ಯ, ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಕೀರ್ತಿ ಪುಟ್ಟಮಲ್ಲೇಗೌಡರಿಗೆ ಸಲ್ಲುತ್ತದೆ.ಗೊರವರ ಕುಣಿತದ ಪುಟ್ಟಮಲ್ಲೇಗೌಡ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಜಾನಪದ ಶ್ರೀ ಪ್ರಶಸ್ತಿ ಪುರಸ್ಕೃತ, ಗೊರವರ ಕುಣಿತದ ಕಲಾವಿದ ರಾಮಸಮುದ್ರದ ಪುಟ್ಟಮಲ್ಲೇಗೌಡ (95) ಸೋಮವಾರ ರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಮೃತರಿಗೆ ಇಬ್ಬರು ಪುತ್ರಿಯರಿದ್ದಾರೆ. ಸ್ಥಳೀಯ ಕಲೆಯನ್ನು ದೇಶದ ವಿವಿಧೆಡೆಗೆ ಪಸರಿಸಿದ ಪುಟ್ಟಮಲ್ಲೇಗೌಡರ ಸೇವೆಯನ್ನು ಗುರುತಿಸಿ ಜಾನಪದಶ್ರೀ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಜಾನಪದ ಲೋಕ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ದೆಹಲಿ, ಪಾಂಡಿಚೇರಿ, ಅಂಡಮಾನ್‌ ನಿಕೋಬಾರ್‌ ಸೇರಿದಂತೆ ವಿವಿಧೆಡೆ ಅವರು ಗೊರವರ ಕುಣಿತ ಪ್ರದರ್ಶನ ನೀಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos