ಚಿಕ್ಕಮಗಳೂರು, ಮೇ 22,ನ್ಯೂಸ್ ಎಕ್ಸ್ ಪ್ರೆಸ್ : ಮಂಡ್ಯ ಜನರು ನಿಖಿಲ್ ಅಭ್ಯರ್ಥಿಯಾಗಬೇಕೆಂದು ಬಯಸಿ ಶೃಂಗೇರಿ ಶಾರದಾಂಬೆ ಸನ್ನಿಧಾನಕ್ಕೆ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಎಂಟ್ರಿ ಕೊಟ್ಟಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಫಲಿತಾಂಶ ನಾಳೆ ಹೊರಬೀಳಲಿದೆ. ಶೃಂಗೇರಿ ಶಾರದಾಂಬೆ ಸನ್ನಿಧಾನಕ್ಕೆ ಆಗಮಿಸಿದ್ದಾರೆ. ಶಾರದಾಂಬಾ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಶೃಂಗೇರಿಯಿಂದ ಧರ್ಮಸ್ಥಳಕ್ಕೆ ತೆರಳಲಿದ್ದಾರೆ.
ಇನ್ನು ಮಂಡ್ಯಕ್ಷೇತ್ರದಿಂದ ಸ್ಪರ್ಧಿಸಿರುವ ನಿಖಿಲ್ ಕುಮಾರಸ್ವಾಮಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಬಿಜೆಪಿ ಬೆಂಬಲಿತ ಸುಮಲತಾ ಅಂಬರೀಷ್ ಸ್ಪರ್ಧಿಸಿದ್ದಾರೆ. ಈಗಾಗಲೇ ಕೆಲವು ಎಕ್ಸಿಟ್ಪೋಲ್ಗಳು ಸುಮಲತಾ ಅಂಬರೀಷ್ ಗೆಲ್ಲುತ್ತಾರೆ ಎಂದು ಹೇಳಿವೆ. ಈ ಹಿನ್ನೆಲೆಯಲ್ಲಿ ತಮ್ಮ ಗೆಲುವಿಗಾಗಿ ಶಾರದಾಂಬೆಯ ಕೃಪೆ ಪಡೆಯಲು ನಿಖಿಲ್ ಕುಮಾರಸ್ವಾಮಿ ಶೃಂಗೇರಿಗೆ ಆಗಮಿಸಿದ್ದಾರೆ.