ಬೆಂಗಳೂರು: ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಪಾಕ್ ಪರ ಘೋಷಣೆ ಕೂಗಿರುವ ಆರೋಪ ಸಂಬಂಧ ಆ ರೋಪ ಪ್ರತ್ಯಾರೋಪ ಕೇಳಿಬರುತ್ತಿದ್ದು. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದ ಎಫ್ಎಸ್ಎಲ್ ವರದಿ ಕೈಸೇರಿ 5-6 ಗಂಟೆ ಕಳೆದಿದ್ದರೂ ಇನ್ನೂ ವರದಿಯನ್ನ ಬಹಿರಂಗಪಡಿಸಲು ಮೀನಾ-ಮೇಷ ಎಣಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಅನುಮಾನ ಮೂಡಿಸುತ್ತಿದೆ.
ವರದಿ ಬಹಿರಂಗ ಪಡಿಸುತ್ತೀರೋ ಇಲ್ಲವೋ ಎನ್ನುವ ನಡೆಯ ಮೇಲೆ ತಮ್ಮ ಪಕ್ಷ ನಿಜವಾಗಿಯೂ ದೇಶಪ್ರೇಮಿಗಳ ಪರ ಇದೆಯೋ ಅಥವಾ ದೇಶದ್ರೋಹಿಗಳ ಪರ ಇದೆಯೋ ಎಂಬುದನ್ನು ಕನ್ನಡಿಗರು ನಿರ್ಧಾರ ಮಾಡುತ್ತಾರೆ. ಟ್ವೀಟ್ ಮೂಲಕ ರಾಜ್ಯ ಸರಕಾರದವಿರುದ್ಧ ಕಿಡಿಕಾರಿದ ವಿಪಕ್ಷ ನಾಯಕ ಆರ್. ಅಶೋಕ್.