ಬರಪರಿಹಾರ ಹಣ ಬಿಡುಗಡೆಯಲ್ಲಿ ಕಾಂಗ್ರೆಸ್ ಪಾತ್ರವಿಲ್ಲ: ಆರ್.ಅಶೋಕ್

ಬರಪರಿಹಾರ ಹಣ ಬಿಡುಗಡೆಯಲ್ಲಿ ಕಾಂಗ್ರೆಸ್ ಪಾತ್ರವಿಲ್ಲ: ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಬರಗಾಲದಿಂತ ತತ್ತರಿಸಿದ್ದ ಜನರಿಗೆ ಕೇಂದ್ರ ಸರ್ಕಾರ 3,454 ಕೋಟಿ ರೂ. ಪರಿಹಾರ ನೀಡಿದೆ. ಇದರಲ್ಲಿ ಕಾಂಗ್ರೆಸ್ನ ಯಾವುದೇ ಪಾತ್ರವಿಲ್ಲ ಎಂದು ಆರ್. ಅಶೋಕ್ ಕಿಡಿಕಾರಿದ್ದಾರೆ.

ಇಂದು ಮಲ್ಲೇಶ್ವರದ ಬಿಜೆಪಿ ‌ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ಪರಿಹಾರ ನೀಡಿದೆ. ರಾಜ್ಯದಲ್ಲಿ ಹಿಂದಿನ ನಮ್ಮ ಬಿಜೆಪಿ ಸರ್ಕಾರ ನೀಡಿದಂತೆಯೇ ಡಬಲ್ ಪರಿಹಾರವನ್ನು ಈಗಿನ ಕಾಂಗ್ರೆಸ್ ಸರ್ಕಾರ ನೀಡಬೇಕು ಎಂದು ಅವರು ಆಗ್ರಹಿಸಿದರು.

ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜಾಹೀರಾತಾಗಿದೆ . ಬರಗಾಲದ ಪರಿಹಾರಕ್ಕಾಗಿ ಸರಿಯಾದ ಮಾಹಿತಿ ನೀಡಲು ಕೂಡ ಸರ್ಕಾರ ವಿಳಂಬ ಮಾಡಿತ್ತು. ಕೋರ್ಟ್ ಆದೇಶವಾಗಿದ್ದರೆ ಕರ್ನಾಟಕಕ್ಕೆ ಮಾತ್ರ ಪರಿಹಾರ ಬರಬೇಕಿತ್ತು.

ಆದರೆ ಕೇಂದ್ರ ಸರ್ಕಾರವೇ ಕ್ರಮ ವಹಿಸಿ ಪರಿಹಾರ ನೀಡಿದೆ‌. ಇದರಲ್ಲಿ ಕಾಂಗ್ರೆಸ್ ನ ಶ್ರಮ ಏನೂ ಇಲ್ಲ. ಚುನಾವಣಾ ಆಯೋಗ ಅನುಮತಿ ನೀಡಿರುವುದರಿಂದ ಮಾತ್ರ ಹಣ ಬಿಡುಗಡೆಯಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರ ಬರಗಾಲದ ಪರಿಹಾರದ ಹಣವನ್ನು ಲೂಟಿ ಮಾಡಬಾರದು. ಇದರಲ್ಲೂ ಕೈ ಚಳಕ ಮಾಡಿ ದುಡ್ಡು ಹೊಡೆಯದಂತೆ ನಾವು ಕಾವಲು ಕಾಯುತ್ತೇವೆ. ಬರದಿಂದ ನೊಂದ ರೈತರ ಖಾತೆಗೆ ನೇರವಾಗಿ ಪರಿಹಾರ ನೀಡಬೇಕು. ಈವರೆಗೆ ಬರ ಪರಿಹಾರ ಬಂದಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿತ್ತು.

 

 

 

 

 

 

 

 

 

 

 

 

 

 

 

 

ಫ್ರೆಶ್ ನ್ಯೂಸ್

Latest Posts

Featured Videos