ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದ ಜೆಡಿಎಸ್ ಸಚಿವ.!

ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದ ಜೆಡಿಎಸ್ ಸಚಿವ.!

ಮಂಡ್ಯ, ಏ. 22 ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತರೆ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದ್ದಾರೆ.

ಮಂಡ್ಯದ 8 ಕ್ಷೇತ್ರಗಳಲ್ಲಿಯೂ ಸುತ್ತಾಡಿದ್ದು, ಎಲ್ಲಾ ಕಡೆ ನಿಖಿಲ್ ಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಎದುರಾಳಿ ಸುಮಲತಾ ವಿರುದ್ಧವಾಗಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಸಿ ಎಸ್ ಪುಟ್ಟರಾಜು ಹೇಳಿದ್ದಾರೆ.

ಸುಮಲತಾ ಚಿತ್ರಗಳಲ್ಲಿ ಹೇಗೆ ನಟನೆ ಮಾಡಿದ್ದಾರೋ ಇಲ್ಲವೋ ನನಗೆ ಗೊತ್ತಿಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ಉತ್ತಮ ನಟನೆ ಮಾಡಿದ್ದಾರೆ. ಅವರ ನಟನೆಗೆ ಮಂಡ್ಯ ಜನರು ಮರಳಾಗುವುದಿಲ್ಲ, ಚೆಲುವರಾಯಸ್ವಾಮಿ ಯಾರ ಪರವಾಗಿ ಕೆಲಸ ಮಾಡಿದ್ದಾರೋ, ಅವರೆಲ್ಲರೂ ಸೋತಿದ್ದಾರೆ. ಅದೇ ರೀತಿ ಸುಮಲತಾ ಕೂಡ ಸೋಲಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.ಯಾರೂ ಏನೇ ಹೇಳಿದ್ದರೂ ನಿಖಿಲ್ ಅವರು ಗೆದ್ದೆ ಗೆಲುತ್ತಾರೆ ಒಂದು ವೇಳೆ ಗೆಲ್ಲದಿದ್ದರೆ ರಾಜಕೀಯಕ್ಕೆ ನಿವೃತ್ತಿ ಘೋಷಿಸುವುದಾಗಿ ಸಿ.ಎಸ್. ಪುಟ್ಟರಾಜು ಹೇಳಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos