ರಾಜೀನಾಮೆ ವಾಪಸ್ ಪಡೆಯಲು ಒತ್ತಾಯ        

ರಾಜೀನಾಮೆ ವಾಪಸ್ ಪಡೆಯಲು ಒತ್ತಾಯ        

ಜಡಿಗೇನಹಳ್ಳಿ, ಜು. 12 : ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಎಂಟಿಬಿ ನಾಗರಾಜು ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ವಾಪಸ್ ಪಡೆಯಲು ಒತ್ತಾಯಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಒತ್ತಾಹಿಸಿದ್ದಾರೆ. ಅವರು ಹೊಸಕೋಟೆ ತಾಲ್ಲೂಕು ಕಸಬಾ ಹೋಬಳಿಯ ಚೀಮಂಡಹಳ್ಳಿಯಲ್ಲಿ ನಡೆದ ಪತ್ರಿಕಾ ಗೊಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ನಮ್ಮ ಶಾಸಕರ 3 ಭಾರಿ ಆಯ್ಕೆಯಾಗಿ ಶಾಸಕರಾಗಿ ವಸತಿ ಸಚಿವರಾಗಿ ಉತ್ತಮ ಕೆಸಲಗಳನ್ನು ಮಾಡಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಂದ ಬೆಸತ್ತು ವಸತಿ ಸಚಿವ ಖಾತೆ ಜೋತೆಗೆ ವಿಧಾನಸಭಾ ಸ್ಥಾನಕ್ಕೂ ರಾಜೀನಾಮೆ ನೀಡಿರುವುದು, ಪಕ್ಷದ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ನೋವಾಗಿದೆ.

ಅದ್ದರಿಂದ ನಾನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿ ಅವರ ಮನವೂಲಿಸುವ ಕೆಲಸವನ್ನು ಮಾಡುತ್ತೇನೆ. ಈಗಾಗಲೇ ಮಾನ್ಯ ಸಿದ್ದರಾಮಣ್ಣ, ಡಿ.ಕೆ ಶಿವಕುಮಾರ್, ವೀರಪ್ಪಮೊಯ್ಲಿರವರ ಮನವೂಲಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಕನಿಷ್ಠ ಪಕ್ಷ ತಾಲ್ಲೂಕಿನ ಕಾರ್ಯಕರ್ತರ ಅಭಿಪ್ರಾಯವನ್ನು ಕೇಳದೆ ಮತದಾರರನ್ನು ವಿಶ್ವಾಸಕ್ಕೆ ತೆಗದುಕೊಳ್ಳದೆ. ರಾಜೀನಾಮೆ ಕೋಡುವ ನಿರ್ಧಾರ ಮಾಡಿರುವುದು ತಾಲ್ಲೂಕಿನ ಸಾವಿರಾರು ಜನ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅತೀವ ನೋವುಂಟಾಗಿದೆ. ಅವರನ್ನು ನಾವು ಮತ್ತೊಮ್ಮೆ ಮನವೂಲಿಸಿ ರಾಜೀನಾಮೆ ಹಿಂಪಡೆಯುವಂತೆ ಮತ್ತು ಏನೇ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಪಕ್ಷದ ಹಿತ ದೃಷ್ಟಿಯಿಂದ ಸೂಕ್ತ ಮಟ್ಟದಲ್ಲಿ ಪಕ್ಷದ ನಾಯಕರಲ್ಲಿ ಚರ್ಚಿಸಿ ಬಗೆಹರಿಸಿಕೋಳ‍್ಳೋಣ ಎಂದು ಚೀಮಂಡಹಳ್ಳಿಯ ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮುನಿಶಾಮಣ್ಣ ತಿಳಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos