ಬೆಳಗಾವಿ, ಏ. 23, ನ್ಯೂಸ್ ಎಕ್ಸ್ ಪ್ರೆಸ್: ಇಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಇದು ಅಂತಿಮ ಹಂತದ ಮತದಾನವಾಗಿದೆ. ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ರಾಜಕಾರಣದಲ್ಲಿ ಬಹಳಷ್ಟು ಬದಲಾವಣೆಗಳಾಗುತ್ತವೆ ಎಂಬ ಮಾತುಗಳು ಕೇಳಿ ಬರುತ್ತಿರುವ ಮಧ್ಯೆ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಮತದಾನದ ದಿನದಂದೇ ಪಕ್ಷದ ನಾಯಕರಿಗೆ ಶಾಕ್ ನೀಡಿದ್ದಾರೆ.
ಅವರು ಇಂದು ಗೋಕಾಕ್ ನಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡುತ್ತಾ ನಾನು ಇನ್ನೂ ತಾಂತ್ರಿಕವಾಗಿ ಕಾಂಗ್ರೆಸ್ನಲ್ಲಿ ಇರುವೆ. ರಾಜೀನಾಮೆ ಕೊಟ್ಟ ನಂತರ ಮುಂದಿನ ನಡೆಯನ್ನು ತಿಳಿಸುವುದಾಗಿ ಹೇಳಿದರು. ಇನ್ನು ನನ್ನ ತಮ್ಮನಿಗೆ ತಲೆ ಕೆಟ್ಟಿದೆ, ಒಬ್ಬನ ತಲೆ ಕೆಡಿಸಿದ್ದಾನೆ ಅಂತ ಅವರು ಆರೋಪಿಸಿದರು. ಇನ್ನೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಹಿರಂಗವಾಗಿ, ಬಿಜೆಪಿ ಪರ ರಮೇಶ್ ಜಾರಕಿ ಹೊಳಿ ಮತಯಾಚನೆ ಮಾಡಿದ್ದಾರೆ ಎನ್ನಲಾಗುತ್ತಿದೆ.