ರಾಜ್ಯದ ಇನ್ನೂ 2 ದಿನ ಮಳೆ ಸಾಧ್ಯತೆ

ರಾಜ್ಯದ ಇನ್ನೂ 2 ದಿನ ಮಳೆ ಸಾಧ್ಯತೆ

ಬೆಂಗಳೂರು, ಏ. 19, ನ್ಯೂಸ್ ಎಕ್ಸ್ ಪ್ರೆಸ್: ಬಿಸಿಲಿನ ಬೇಗೆಯಲ್ಲಿ ನಲುಗಿದ ಬೆಂಗಳೂರಿನ ಜನತೆಗೆ ವರುಣನ ಸಿಂಚನವಾಗಿದೆ, ಇನ್ನೂ 2 ದಿನ ಬಾರಿ ಮಳೆಯಾಗುವ ಸಾಧ್ಯತೆ ಇದೆ.

ಬಂಗಾರಪೇಟೆ ತಾಲೂಕಿನ ಮತ್ತೇನಹಳ್ಳಿ ಗ್ರಾಮದಲ್ಲಿ ರಾತ್ರಿ ಸುರಿದ ಗುಡುಗು ಸಹಿತ ಮಳೆಗೆ ವೆಂಕಟೇಶಪ್ಪ ಎಂಬುವರಿಗೆ ಸೇರಿದ ಗುಡಿಸಲು ಸಿಡಿಲಿನಿಂದ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಗುಡಿಸಲಿನಲ್ಲಿದ್ದ 25 ಕೋಳಿಗಳು ಸೇರಿದಂತೆ ಮತ್ತಿತರ ವಸ್ತುಗಳು ಹಾನಿಯಾಗಿವೆ.

ಬೆಂಗಳೂರಿನ ವಿಜಯನಗರ, ಮಾಗಡಿರಸ್ತೆ, ಕೆಂಗೇರಿ, ಜ್ಞಾನಭಾರತಿ, ಯಶವಂತಪುರ, ಹೆಬ್ಬಾಳ ಸೇರಿದಂತೆ ಕೆಲವು ಕಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದ್ದು, ಸ್ಥಳೀಯರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ನೆಲಮಂಗಲದಲ್ಲಿ ಭಾರೀ ಬಿರುಗಾಳಿಗೆ ಮರವೊಂದು ಕಾರಿನ ಮೇಲೆ ಬಿದ್ದು ಸಂಪೂರ್ಣ ಜಖಂಗೊಂಡಿದೆ. ಇನ್ನು ಫ್ಲೈಓವರ್ಗಳ ಮೇಲೆ ನೀರು ಜಲಪಾತದಂತೆ ಸುರಿಯುತ್ತಿತ್ತು. ಹಾಗಾಗಿ ಕೆಲವು ಕಡೆ ಸಂಚಾರ ದಟ್ಟಣೆಯೂ ಹೆಚ್ಚಾಗಿತ್ತು.

ದಕ್ಷಿಣ ಒಳನಾಡಿನಲ್ಲಿ ದಾಳಿಯ ಒತ್ತಡ ಕಡಿಮೆಯಾದ ಹಿನ್ನೆಲೆಯಲ್ಲಿ ರಾಜಧಾನಿ ಸೇರಿದಂತೆ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ ಸೇರಿದಂತೆ ಇನ್ನು 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳಿಂದ ತಿಳಿದುಬಂದಿದೆ.

 

ಫ್ರೆಶ್ ನ್ಯೂಸ್

Latest Posts

Featured Videos