ರಾಮನಗರದಲ್ಲಿ 2 ಸಜೀವ ಬಾಂಬ್ ಪತ್ತೆ!

ರಾಮನಗರದಲ್ಲಿ 2 ಸಜೀವ ಬಾಂಬ್ ಪತ್ತೆ!

ಬೆಂಗಳೂರು, ಜೂ. 26: ರಾಮನಗರದ ಟಿಪ್ಪು ನಗರದ ರಾಜಕಾಲುವೆಯಲ್ಲಿ ಎರಡು ಸಜೀವ ಬಾಂಬ್ ಪತ್ತೆಯಾಗಿದ ಎನ್ನಲಾಗಿದ್ದು, ಇನ್ನೂ ಹಲವು ಕಡೆ ಬಾಂಬ್ ಇರಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಎನ್ಐಎ, ಗುಪ್ತದಳ ಮತ್ತು ಪೊಲೀಸರಿಂದ ಪತ್ತೆ ಕಾರ್ಯಾಚರಣೆ ನಡೆದಿದೆ.
ದೊಡ್ಡಬಳ್ಳಾಪುರದಲ್ಲಿ ನೆನ್ನೆ ಬಂಧಿತನಾದ ಉಗ್ರ ಹಬೀಬುಲ್ಲಾ ರಹಮಾನ್ ನೀಡಿದ ಮಾಹಿತ ಆಧಾರದಲ್ಲಿ ರಾಮನಗರದಲ್ಲಿ 2 ಸಜೀವ ಬಾಂಬ್ ಗಳನ್ನು ಪತ್ತೆ ಹಚ್ಚಲಾಗಿದೆ ಎನ್ನಲಾಗಿದೆ.
ದೊಡ್ಡಬಳ್ಳಾಪುರದ ಮಸೀದಿಯೊಂದರ ಸಮೀಪದ ಬಾಡಿಗೆ ಮನೆಯಲ್ಲಿ ಜಮಾತ್ ಉಲ್ ಮುಜಾಹಿದೀನ್ ಬಾಂಗ್ಲಾದೇಶ ಸಂಘಟನೆಯ ಉಗ್ರ ಹಬೀಬುಲ್ಲಾ ರೆಹಮಾನ್ ನನ್ನು ಮಂಗಳವಾರ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಬಂಧಿಸಿದ್ದರು.
ಪಶ್ಚಿಮ ಬಂಗಾಳದ ಬುರ್ದ್ವಾನ್ ಜಿಲ್ಲೆಯ ಖಗ್ರಾಗಡ ಎಂಬಲ್ಲಿ 2014ರ ಅಕ್ಟೋಬರ್ 2ರಂದು ಹಸನ್ ಚೌಧರಿ ಎಂಬಾತನ ನಿವಾಸದಲ್ಲಿ ಕಚ್ಚಾ ಬಾಂಬ್ ತಯಾರಿಸುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿತ್ತು. ಇದರಲ್ಲಿ ಇಬ್ಬರು ಮೃತಪಟ್ಟು, ಒಬ್ಬ ಗಾಯಗೊಂಡಿದ್ದ. ಈ ಬಾಂಬ್ ತಯಾರಿಕೆಯಲ್ಲಿ ಭಾಗಿಯಾಗಿದ್ದ ಹಬೀಬುಲ್ ರೆಹಮಾನ್ ತಲೆಮರೆಸಿಕೊಂಡಿದ್ದ.
ಈ ಪ್ರಕರಣದ ಕುರಿತು ಬುರ್ದ್ವಾನ್ ಜಿಲ್ಲಾ ಪೊಲೀಸರು ತನಿಖೆ ನಡೆಸಿದ್ದರು. ನಂತರ ಪಶ್ಚಿಮ ಬಂಗಾಳದ ಸಿಐಡಿಗೆ ವರ್ಗಾಯಿಸಲಾಗಿತ್ತು. ಕೊನೆಗೆ ಎನ್ಐಗೆ ವಹಿಸಲಾಗಿತ್ತು. ಹಬೀಬುಲ್ಲಾನ ಜಾಡು ಹುಡುಕುತ್ತಿದ್ದ ಎನ್ಐಎ ಅಧಿಕಾರಿಗಳಿಗೆ ಕೊನೆಗೂ ಆತ ದೊಡ್ಡಬಳ್ಳಾಪುರಕ್ಕೆ ಬಂದು ಆಶ್ರಯ ಪಡೆದಿರುವುದು ಗೊತ್ತಾಗಿತ್ತು.

ಫ್ರೆಶ್ ನ್ಯೂಸ್

Latest Posts

Featured Videos