ರಾಯಚೂರು, ಜೂ. 26 : ಇಂದು ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕರೇಗುಡ್ಡದಲ್ಲಿ ಗ್ರಾಮವಾಸ್ತವ್ಯ ನಡೆಸಿರುವ ಅವರು, ರಾಯಚೂರಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸುಮಾರು 3 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರು ಜಿಲ್ಲೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳು ಅಧಿಕಾರಿಗಳ ಜೊತೆ ಚರ್ಚಿಸಿ ನೀಲನಕ್ಷೆ ತಯಾರಿಸಲಾಗುವುದು. ಯಾವುದಕ್ಕೆ ಆದ್ಯತೆ ಕೊಡಬೇಕೆಂದು ಚರ್ಚಿಸುತ್ತೇನೆ. 300 ಕೊಟಿ ರೂ. ಹಣ ಬಿಡುಗಡೆಗೆ ಸಿದ್ಧತೆ ನಡೆಯುತ್ತಿದೆ ಎಂದು ಹೇಳಿದರು.