ಬೆಂಗಳೂರುಮಾ.18, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದಲೇ ಸ್ಪರ್ಧಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕೆಪಿಸಿಸಿ ಅಧಿಕೃತ ಆಹ್ವಾನ ನೀಡಿದೆ.
ಕಳೆದ 1 ವಾರದಿಂದ ರಾಹುಲ್ ಗಾಂಧಿ ಸ್ಪರ್ಧೆ ಕುರಿತಂತೆ ಕರ್ನಾಟಕದಲ್ಲಿ ಸಾಕಷ್ಟು ಗಾಳಿಸುದ್ದಿಗಳು ಹರಿದಾಡುತ್ತಿತ್ತು.
ಇದಕ್ಕೆ ಪೂರಕವೆನ್ನುವಂತೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಕರ್ನಾಟಕದಿಂದ ಸ್ಪರ್ಧಿಸುವಂತೆ ಟ್ವಿಟ್ಟರ್ನಲ್ಲಿ ಆಹ್ವಾನ ನೀಡಿದ್ದರು.
ಈಗ ರಾಹುಲ್ ಗಾಂಧಿಗೆ ಅಧಿಕೃತ ಪತ್ರ ಬರೆದಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕರ್ನಾಟಕದಿಂದಲೇ ಯಾವದಾದರೊಂದು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಬೇಕೆಂದು ಮನವಿ ಮಾಡಿದ್ದಾರೆ. ಈ ಹಿಂದೆ ಸೋನಿಯಾ ಗಾಂಧಿ ಕೂಡ ಸ್ಪರ್ಧಿಸಿರುವುದನ್ನು ಉಲ್ಲೇಖಿಸಿ ಈ ಆಹ್ವಾನವನ್ನು ನೀಡಲಾಗಿದೆ.