ನವದೆಹಲಿ, ಡಿ. 13 : ರಾಹುಲ್ ಗಾಂಧಿ ವಿರುದ್ಧ ಸ ಕೇಂದ್ರ ಸಚಿವೆ ಸ್ಮೃತಿ ಇರಾನಿ ಲೋಕಸಭೆಯಲ್ಲಿ ಕೆಂಡಮಂಡಲಾಗಿದ್ದಾರೆ.ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣ ಉಲ್ಲೇಖಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಲೋಕಸಭೆಯಲ್ಲಿ ಕೆಂಡಾಮಂಡಲರಾಗಿ ತರಾಟೆಗೆ ತೆಗೆದುಕೊಂಡ ಪ್ರಸಂಗ ಶುಕ್ರವಾರ ನಡೆಯಿತು.
ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖಂಡರೊಬ್ಬರು ಭಾರತೀಯ ಮಹಿಳೆಯ ಮೇಲೆ ಅತ್ಯಾಚಾರ ಎಸಗಬೇಕು ಎಂಬಂತಹ ಹೇಳಿಕೆಯನ್ನು ನೀಡಿದ್ದಾರೆ. ಇದೇನಾ ದೇಶದ ಜನರಿಗೆ ರಾಹುಲ್ ಗಾಂಧಿ ನೀಡುವ ಸಂದೇಶ? ಇಂತಹ ಹೇಳಿಕೆ ನೀಡಿದ ರಾಹುಲ್ ಗೂ ಶಿಕ್ಷೆಯಾಗಬೇಕು ಎಂದು ಸ್ಮೃತಿ ಇರಾನಿ ಲೋಕಸಭೆಯಲ್ಲಿ ಕಿಡಿಕಾರಿದರು.