ದಾವಣಗೆರೆ, ಸೆ. 30 : ಮೊಬೈಲ್ ಕಳೆದಿದ್ದಕ್ಕೆ ಮನೆಯವರು ಬೈಯುತ್ತಾರೆ ಎಂದು ಹೆದರಿ ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಡಿಸಿಎಂ ಟೌನ್ ಶಿಪ್ ಬಳಿ ನಡೆದಿದೆ.
ದಾವಣಗೆರೆಯ ನಿಟ್ಟುವಳ್ಳಿಯ ನಿವಾಸಿ (22) ಸಿದ್ದೇಶ್. ಮೊಬೈಲ್ ಕಳೆದುಕೊಂಡಿರುವ ವಿಚಾರ ಮನೆಯವರಿಗೆ ಗೊತ್ತಾದರೆ ಬೈಯುತ್ತಾರೆ ಎಂದು ಹೆದರಿ ಆತ ಇಂದು ಬೆಳಗ್ಗೆ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಕೆಟಿಜೆ ನಗರ ಹಾಗೂ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.