ಚಿಕ್ಕಮಗಳೂರು, ಆ. 10: ಶೃಂಗೇರಿ ತಾಲೂಕಿನಲ್ಲಿ ಮುಂಗಾರು ಮಳೆಯ ಆರ್ಭಟ ಜೊರಾಗಿದ್ದು, ಶುಕ್ರವಾರವೂ ನಿರಂತರ ಮಳೆ, ಗಾಳಿಯ ಆರ್ಭಟ ಹೆಚ್ಚಾಗಿದೆ. ಗುರುವಾರ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯಲ್ಪಟ್ಟು ತಗ್ಗುಪ್ರದೇಶಗಳೆಲ್ಲ ಜಲಾವೃತಗೊಂಡಿವೆ ಹಲವು ರಸ್ತೆಯ ಮೇಲೆ ಪ್ರವಾಹ ಉಂಟಾಗಿ ರಸ್ತೆ ಸಂಚಾರ ಕಡಿತಗೊಂಡಿತ್ತು.
ರಸ್ತೆ ಮತ್ತು ದೂರವಾಣಿ ಸಂಪರ್ಕ ಸ್ಥಗಿತ!
ಶುಕ್ರವಾರವೂ ಮಳೆಗಾಳಿಯ ಆರ್ಭಟ ಮುಂದುವರಿದ್ದರಿಂದ ಗಾಂಧಿಮೈದಾನ, ಕುರುಬಗೇರಿ ಜಲಾವೃತಗೊಂಡಿತ್ತು. ರಸ್ತೆಯ ಮೇಲೆ ಮರಗಳು ಉರುಳಿಬಿದ್ದ ಪರಿಣಾಮ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕಳೆದ 4-5 ದಿನಗಳಿಂದ ನಿರಂತರ ಮಳೆಯ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡು ಮೊಬೈಲ್, ದೂರವಾಣಿ ಸಂಪರ್ಕವೂ ಸ್ಥಗಿತಗೊಂಡಿದೆ.