ಬೆಂಗಳೂರು: ದೇಶದಲ್ಲಿ ತಾಪಮಾನ ಏರಿಕೆಯಿಂದ ಜನರು ಕಂಗಾಲಾಗಿದ್ದರು. ಈ ನಡುವೆ ವರುಣ ದೇವನ ಆಗಮನವೂ ಆಗಿದೆ, ದೆಹಲಿ ಹಾಗೂ ಎನ್ಸಿಆರ್ನಲ್ಲಿ ಗುರುವಾರ ಸಾಧಾರಣ ಮಳೆಯಾಗಿದೆ. ಮಾರ್ಚ್ 19ರವರೆಗೂ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಲವು ರಾಜ್ಯಗಳಲ್ಲಿ ಮಾರ್ಚ್ 19ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಲಿದೆ. ಕೇರಳ, ಮಾಹೆ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ನಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶ 2 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.