ಬೆಂಗಳೂರು: ‘ರೈತ ವಿರೋಧಿ, ಯುಜನ ವಿರೋಧಿ ಬಜೆಟ್ ಇದಾಗಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಕೇಂದ್ರ ಬಜೆಟ್ ಮಂಡನೆಯಾಗಿದೆ. ‘ಪ್ರಧಾನಿ ನರೇಂದ್ರ ಮೋದಿ ಅವರು ರೈತ ಮತ್ತು ಯುವಜನ ಎರಡೂ ವರ್ಗಕ್ಕೂ ದ್ರೋಹ ಬಗೆದಿದ್ದಾರೆ’ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
2019-20ರ ಕೇಂದ್ರದ ಮಧ್ಯಂತರ ಬಜೆಟ್ ಸಂಪೂರ್ಣವಾಗಿ ‘ರೈತ ವಿರೋಧಿ’ ಮತ್ತು ‘ಯುವಜನ ವಿರೋಧಿ’ ಆಗಿದೆ. ತೀರಾ ಸಂಕಷ್ಟದಲ್ಲಿರುವ ಈ ಎರಡೂ ವರ್ಗಗಳಿಗೆ ಸಮಾಧಾನ ನೀಡಬಲ್ಲ ಬಲವಾದ ಯಾವ ಯೋಜನೆಗಳೂ ಬಜೆಟ್ ನಲ್ಲಿ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.