ರಾಯಚೂರು, ಆ, 5: ಇಂದು ಬಿ. ಎಸ್. ಯಡಿಯೂರಪ್ಪ ಅವರು, ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ರಾಯಚೂರಿಗೆ ಆಗಮಿಸಿದರು. ಕುರ್ವಾಕುಲ, ಕುರ್ವಾಕುರ್ದಾ ಗ್ರಾಮದ ಬಳಿಯಲ್ಲಿ ಕೃಷ್ಣಾ ನದಿ ಪ್ರವಾಹ ವೀಕ್ಷಿಸಿದ ಸಿಎಂ ಬಳ್ಳಾರಿಯಿಂದ ಹೆಲಿಕಾಪ್ಟರ್ ಮುಖಾಂತರ ರಾಯಚೂರಿಗೆ ಆಗಮಿಸಿದರು. ನಂತರ ಮಾತನಾಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಯಾವ ರೈತರು ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಮೊದಲು ಆದ್ಯತೆ ರೈತರಿಗೆ ನಾನು ನೀಡುತ್ತೇನೆ ಎಂದು ಭರವಸೆ ನೀಡಿದರು. ನಾನು ಇವತ್ತು ರಾತ್ರಿ ದೆಹಲಿ ಹೋಗಿ ಮೋದಿ ಅವರನ್ನು ಭೇಟಿಯಾಗುತ್ತೇವೆ. ಪ್ರವಾಹ ಪರಿಹಾರಕ್ಕೆ ಹೆಚ್ಚಿನ ಅನುದಾನ ತರಲು ಪ್ರಯತ್ನಿಸುತ್ತೇನೆ. ಪರಿಸ್ಥಿತಿ ನಿಭಾಯಿಸಲು ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗಿದೆ ಎಂದರು.