ಮತ್ತೆ ಅಖಾಡಕ್ಕಿಳಿದ ರಾಜಾಹುಲಿ

ಮತ್ತೆ ಅಖಾಡಕ್ಕಿಳಿದ ರಾಜಾಹುಲಿ

ಬೆಂಗಳೂರು, ಸೆ.9- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗ ಪುನಃ ಸಕ್ರಿಯರಾಗಿದ್ದು, ಬಿಜೆಪಿ ಬಿಡಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದ ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ ಹಾಗೂ ಶಂಕರ್ ಪಟೇಲ್ ಮುನೇನಕೊಪ್ಪ ಅವರ ಜೊತೆ ಗುಪ್ತವಾಗಿ ಮಾತುಕತೆ ನಡೆಸಿ ಪಕ್ಷ ಬಿಡುವ ತೀರ್ಮಾನದಿಂದ ಹಿಂದೆ ಸರಿಯುವಂತೆ ಸೂಚಿಸಿದ್ದಾರೆ ಅಸಮಾಧಾನಿತರನ್ನು ಓಲೈಸಲು ಮುಂದಾಗಿದ್ದಾರೆ..

ಡಾಲರ್ಸ್ ಕಾಲೊನಿಯ ತಮ್ಮ ನಿವಾಸದಲ್ಲಿ ರೇಣುಕಾಚಾರ್ಯ ಮತ್ತು ಮುನೇನಕೊಪ್ಪ ಜೊತೆ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ ಯಡಿಯೂರಪ್ಪ ಬಿಜೆಪಿ ಬಿಟ್ಟು ಹೋಗಬಾರದು. ನಿಮಗೆ ಕೆಲವರಿಂದ ಅನ್ಯಾಯವಾಗಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಆದರೆ ಬಿಜೆಪಿ ಬಿಡುವಂತಹ ತೀರ್ಮಾನವನ್ನು ತೆಗೆದುಕೊಳ್ಳಬೇಡಿ. ಇದರಿಂದ ನಿಮ್ಮ ರಾಜಕೀಯ ಭವಿಷ್ಯ ಹಾಳಾಗಲಿದೆ ಎಂಬ ಎಚ್ಚರಿಕೆಯನ್ನು ಕೊಟ್ಟಿದ್ದಾರೆ.
ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿರುವುದು ಬಿಜೆಪಿಯೊಳಗೆ ಕೆಲವು ನಾಯಕರಿಗೆ ತಳಮಳ ಸೃಷ್ಟಿಸಿದೆ. ದೆಹಲಿ ನಾಯಕರು ಪಕ್ಷದಲ್ಲಿ ಸಕ್ರಿಯರಾಗುವಂತೆ ಬಿಎಸ್‍ವೈ ಅವರಿಗೆ ಮನವಿ ಮಾಡಿದ್ದರಿಂದಲೇ ಈ ಚಟುವಟಿಕೆಗಳು ಆರಂಭವಾಗಿವೆ. ತಮ್ಮ ಪುತ್ರ ವಿಜಯೇಂದ್ರಗೆ ಪಕ್ಷದೊಳಗೆ ಸೂಕ್ತ ಸ್ಥಾನಮಾನ ನೀಡಬಹುದೆಂಬ ಲೆಕ್ಕಾಚಾರದಿಂದಲೇ ಯಡಿಯೂರಪ್ಪ ಪುನಃ ಸಕ್ರಿಯರಾಗಿರಬಹುದೆಂಬ ಚರ್ಚೆಗಳು ಬಿಜೆಪಿಯಲ್ಲಿ ಆರಂಭವಾಗಿವೆ.

ಫ್ರೆಶ್ ನ್ಯೂಸ್

Latest Posts

Featured Videos