ರಾಜ್ಯದಲ್ಲಿ ನಷ್ಟವಾದ್ರು ಪ್ರಧಾನ ವೈಮಾನಿಕ ಸಮೀಕ್ಷೆ ನಡೆಸಿಲ್ಲ: ಸಿದ್ದು

ರಾಜ್ಯದಲ್ಲಿ ನಷ್ಟವಾದ್ರು ಪ್ರಧಾನ ವೈಮಾನಿಕ ಸಮೀಕ್ಷೆ ನಡೆಸಿಲ್ಲ: ಸಿದ್ದು

ಬೆಳಗಾವಿ, ಆ. 28: ಇಂದು ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ. ಕೇಂದ್ರ ಸರ್ಕಾರ ರೈತರು ಮತ್ತು ಬಡವರ ಬಗ್ಗೆ ಕಾಳಜಿ ಇರುವ ಸರ್ಕಾರವಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಪ್ರವಾಹ ಬಂದಿದ್ದರೂ ಇದುವರೆಗೂ ರಾಜ್ಯಕ್ಕೆ 1 ರೂ. ಸಹ ಪರಿಹಾರ ಬಿಡುಗಡೆಯಾಗಿಲ್ಲ. ಜೊತೆಗೆ ರಾಜ್ಯದಲ್ಲಿ ಪ್ರವಾಹದಿಂದಾಗಿ ಇಷ್ಟಲ್ಲಾ ನಷ್ಟವಾಗಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಿಲ್ಲ. ಅವರಿಗೆ ವಿದೇಶಕ್ಕೆ ಹೋಗಲು ಸಮಯ ಸಿಗುತ್ತದೆ. ಅವರು ವಿದೇಶದಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos