ರಕ್ಷಾ ರಾಮಯ್ಯ ಪರವಾಗಿ ಸಿಎಂ ಸಿದ್ದರಾಮಯ್ಯ ಪ್ರಚಾರ

ರಕ್ಷಾ ರಾಮಯ್ಯ ಪರವಾಗಿ ಸಿಎಂ ಸಿದ್ದರಾಮಯ್ಯ ಪ್ರಚಾರ

ಚಿಕ್ಕಬಳ್ಳಾಪುರ: ದೇಶದೆಲ್ಲೆಡೆ ಹಾಗೂ ರಾಜ್ಯದಲ್ಲಡೆ ಲೋಕಸಭಾ ಚುನಾವಣೆ ರಂಗೆರಿದ್ದು ಅಭ್ಯರ್ಥಿಗಳ ಪರ ಮುಖಂಡರು ಮತಯಾಚಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ ಸುಧಾಕರ್ ಅವರು ಸ್ಪರ್ಧಿಸುತ್ತಿದ್ದಾರೆ ಅವರ ವಿರುದ್ಧವಾಗಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಾ ರಾಮಯ್ಯ ಅವರು ಸ್ಪರ್ಧಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಬೃಹತ್ ರೋಡ್ ಶೋ ನಡೆಸಿಲಿದ್ದಾರೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಇಂದು ಬಾಗೇಪಲ್ಲಿ ಕ್ಷೇತ್ರಕ್ಕೆ ಬರಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಬೃಹತ್ ರೋಡ್ ಶೋ ಹಾಗೂ ಬಹಿರಂಗ ಸಭೆ ನಡೆಯಲಿದ್ದು ಪ್ರಚಾರ ಸಭೆಯಲ್ಲಿ ಡಿಕೆ ಶಿವಕುಮಾರ್ ಕೂಡ ಭಾಗಿಯಾಗಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಾಸಕರು ಸೇರಿದಂತೆ ಅನೇಕ ರಾಜ್ಯ ಮಟ್ಟದ ನಾಯಕರು ರಕ್ಷಾ ರಾಮಯ್ಯ ಪರ ಮಾತಪ್ರಚಾರ ನಡೆಸಲಿದ್ದಾರೆ. ಪಟ್ಟಣದಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ.

ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿಯಾಗುವಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್ ಪಕ್ಷದ ಮುಖಂಡರು, ಜನ ಪ್ರತಿನಿದಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬೃಹತ್ ಸಂಖ್ಯೆಯಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ, ಮಾಜಿ ಶಾಸಕ ಶಿವಶಂಕರ ರೆಡ್ಡಿ ಸೇರಿ ಹಲವು ನಾಯಕರು ಇವರೊಂದಿಗೆ ಸಾಥ್ ನೀಡಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos