ರಮೇಶ್ ಬಾಬು ಕೈ ಬಲಪಡಿಸಲು ಕರೆ

ರಮೇಶ್ ಬಾಬು ಕೈ ಬಲಪಡಿಸಲು ಕರೆ

ಮಾಲೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಶಿಕ್ಷಕರ ಮತ್ತು ಪಧವಿದರರ ಬಗ್ಗೆ ಕಾಳಜಿಯಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಮೇಶ್‌ಬಾಬುರನ್ನು ಗೆಲ್ಲಿಸಲು ಪಧವಿದರರು, ಕಾರ್ಯಕರ್ತರು ಶ್ರಮವಹಿಸಬೇಕು ಎಂದು ಶಾಸಕ ಕೆ.ವೈ.ನಂಜೇಗೌಡ ಕರೆ ನೀಡಿದರು.

ಪಟ್ಟಣದ ಪದ್ಮಾವತಿ ಕಾಂಫ್ಲೆಕ್ಸ ಸಭಾಂಗಣದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೇಸ್ ವತಿಯಿಂದ ಹಮ್ಮಿಕೊಂಡಿದ್ದ ಆಗ್ನೆಯ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು,

ತಾಲೂಕಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ರದ ಮತ ನೀಡುವುದರ ಮೂಲಕ ನಮ್ಮ ಕ್ಷೇತ್ರದಲ್ಲಿನ ಕಾಂಗ್ರೆಸ್ ಪಕ್ಷದ ಶಕ್ತಿಯನ್ನು ಪ್ರದರ್ಶಿಸಬೇಕು. ರಾಜಕೀಯ ಕ್ಷೇತ್ರದಲ್ಲಿ ಕಪ್ಪು ಚುಕ್ಕೆ ಇಲ್ಲದ ವ್ಯಕ್ತಿ ರಮೇಶ್ ಬಾಬು ಅವರಿಗೆ ಸಿಕ್ಕಂತಹ ಕಡಿಮೆ ಅವಧಿಯಲ್ಲಿಯೇ ಶಿಕ್ಷಕರ ಹಾಗೂ ಪದವೀಧರರ ಧ್ವನಿಯಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದರು.

ವಿಧಾನಪರಿಷತ್ ಹಾಗೂ ಉಪಚುನಾವಣೆಯನ್ನು ಕಾಂಗ್ರೆಸ್‌ನ ಮುಖಂಡರುಗಳು ಹಾಗೂ ಕಾರ್ಯಕರ್ತರು ಪ್ರತಿಷ್ಟೆಯಾಗಿ ತೆಗೆದುಕೊಂಡು ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮುಂದಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಈ ಫಲಿತಾಂಶವನ್ನು ಕೊಚೆಯನ್ನಾಗಿ ಮಾಡಬೇಕೆಂದರು.

ಖಾಸಗಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹನುಮಂತಯ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಚ್.ಚನ್ನರಾಯಪ್ಪ, ಮಾಜಿ ಜಿಪಂ ಸದಸ್ಯ ಆನೇಪುರ ಹನುಮಂತಪ್ಪ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಟಿ.ಮುನಿಯಪ್ಪ, ಮಹಿಲಾ ಘಟಕ ಜಿಲ್ಲಾಧ್ಯಕ್ಷೆ ರತ್ನಮ್ಮ ಚಂದ್ರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೇಹಳ್ಳಿ ನಾರಾಯಣಸ್ವಾಮಿ, ಮಧುಸೂದನ್, ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಮೈಲಾಂಡಹಳ್ಳಿ ನಾರಾಯಣಸ್ವಾಮಿ, ಯುವ ಕಾಂಗ್ರೇಸ್ ಅಧ್ಯಕ್ಷ ನಾಗಾಪುರ ನವೀನ್, ಜಿಲ್ಲಾ ಕಾರ್ಯದರ್ಶಿ ಕಿರಣ್ ಪಂಡು, ಮುಖಂಡರಾದ ಅಂಜನಿ ಸೋಮಣ್ಣ, ಕೆಡಿಪಿ ಮಾಜಿ ಸದಸ್ಯ ವಿಜಯನರಸಿಂಹ, ಮಾಸ್ತಿ ಚೇತನ್, ಮಾಸ್ತಿ ಪ್ರವೀಣ್, ಸರ್ಕಾರಿನೌಕರರ ಸಂಘದಪ್ರಧಾನ ಕಾರ್ಯದರ್ಶಿ ಸುರೇಶ್, ಖಜಾಂಚಿ ಟಿ.ವೆಂಕಟಸ್ವಾಮಿ, ಸ.ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ಆರ್.ನರಸಿಂಹ ಸೇರಿದಂತೆ ಇನ್ನಿತರರು ಹಾಜರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos