ಸದನಕ್ಕೆ ಹಾಜರಾಗಲು ಆಗಲ್ಲ: ಸ್ಪೀಕರ್ ಗೆ ರಮೇಶ್ ಜಾರಕಿಹೊಳಿ ಪತ್ರ

ಸದನಕ್ಕೆ ಹಾಜರಾಗಲು ಆಗಲ್ಲ: ಸ್ಪೀಕರ್ ಗೆ ರಮೇಶ್ ಜಾರಕಿಹೊಳಿ ಪತ್ರ

ಬೆಂಗಳೂರು: ದೋಸ್ತಿ ಸರ್ಕಾರದ ವಿಧಾನಮಂಡಲ ಅಧಿವೇಶನ ಇಂದು ನಡೆಯಲಿದ್ದು, ಅತೃಪ್ತ ಶಾಸಕರು ಹಾಜರಾಗವುದು ಅನುಮಾನ ಎನ್ನಲಾಗುತ್ತಿದೆ.

ಈ ನಡುವೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸದನಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ಸ್ಪೀಕರ್ ಗೆ ಪತ್ರ ಬರೆದಿದ್ದಾರೆ.

ಇಂದಿನಿಂದ ವಿಧಾನಸೌಧದಲ್ಲಿ ನಡೆಯಲಿರುವ ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ವಿಪ್ ಜಾರಿ ಮಾಡಲಾಗಿದೆ. ಆದರೆ ರಮೇಶ್ ಜಾರಕಿಹೊಳಿ ಅವರು ನಿನ್ನೆ ಸಂಜೆ ಸ್ಪೀಕರ್ ರಮೇಶ್ ಕುಮಾರ್ ಗೆ ಪತ್ರ ಬರೆದು ವಿಷಯ ತಿಳಿಸಿದ್ದಾರೆ.

ಒಂದು ವೇಳೆ ವಿಪ್ ಉಲ್ಲಂಘನೆ ವಿಚಾರದಲ್ಲಿ ಕ್ರಮಕ್ಕೆ ಮುಂದಾದರೆ ತಕ್ಷಣ ಬೆಂಗಳೂರಿಗೆ ಬಂದು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos