ಚುನಾವಣಾ ಫಲಿತಾಂಶದ ಬಳಿಕ ಜಾರಕಿಹೊಳಿ ಮಹತ್ವದ ನಿರ್ಧಾರ

ಚುನಾವಣಾ ಫಲಿತಾಂಶದ ಬಳಿಕ ಜಾರಕಿಹೊಳಿ ಮಹತ್ವದ ನಿರ್ಧಾರ

ಬೆಳಗಾವಿ, ಮೇ.8, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆಯ ಫಲಿತಾಂಶವು ಮೇ 23ರಂದು ಪ್ರಕಟಗೊಂಡ ಬಳಿಕ ಮಾತನಾಡುವುದಾಗಿ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದರು. ಏಪ್ರಿಲ್ 23ರಂದು ಇಲ್ಲಿ ಲೋಕಸಭೆಗೆ ಚುನಾವಣೆ ನಡೆದ ಬಳಿಕ ಬೆಂಗಳೂರಿಗೆ ತೆರಳಿದ್ದ ರಮೇಶ್ ಜಾರಕಿಹೊಳಿ ಅವರು ಇಂದು ಮರಳಿದ್ದಾರೆ. ಅವರು ಲೋಕಸಭೆ ಫಲಿತಾಂಶದ ಬಳಿಕ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವುದು ಈಗ ಎಲ್ಲರಲ್ಲೂ ಕುತೂಹಲಕ್ಕೆ ಕಾರಣವಾಗಿದೆ. ಜಾರಕಿಹೊಳಿ ಅವರ ಇಬ್ಬರು ಬೆಂಬಲಿಗರು ಗ್ರಾಮ ಪಂಚಾಯಿಗೆ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ. ಜಾರಕಿಹೊಳಿ ಅವರು ಬೆಂಬಲಿಗರ ಜತೆ ಸಭೆ ನಡೆಸಿ ಬಳಿಕ ನಿರ್ಧಾರ ತೆಗೆದುಕೊಳ್ಳುವರು ಎಂದು ಅವರ ಆಪ್ತ ವಲಯಗಳು ಹೇಳಿವೆ.

ಫ್ರೆಶ್ ನ್ಯೂಸ್

Latest Posts

Featured Videos