ಸಿದ್ದು ಆರೋಗ್ಯ ವಿಚಾರಿಸಿದ ರಮೇಶ್ ಜಾರಕಿಹೊಳಿ!

ಸಿದ್ದು ಆರೋಗ್ಯ ವಿಚಾರಿಸಿದ ರಮೇಶ್ ಜಾರಕಿಹೊಳಿ!

ಬೆಂಗಳೂರು, ಡಿ. 13: ಮಾಜಿ ಸಿಎಂ ಸಿದ್ದರಾಮಯ್ಯರ ಆರೋಗ್ಯದಲ್ಲಿ ಚೆತರಿಕೆ ಗೊಂಡಿದ್ದು, ನೂತನ ಶಾಸಕ ರಮೇಶ್ ಜಾರಕಿಹೊಳಿ ಅವರು ಇಂದು ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಆಂಜಿಯೋಪ್ಲ್ಯಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಸಿದ್ದರಾಮಯ್ಯರ ಆರೋಗ್ಯ ವಿಚಾರಿಸಿ ಕೆಲ ಕಾಲ ಮಾತುಕತೆ ನಡೆಸಿದರು.

ಬಳಿಕ ಮಾತನಾಡಿದ ರಮೇಶ್ ಜಾರಕಿಹೊಳಿ, ಸಿದ್ದರಾಮಯ್ಯನವ್ರು ಆರೋಗ್ಯವಾಗಿದ್ದಾರೆ. ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ. ನಾನು ಉಪ ಚುನಾವಣೆಯಲ್ಲಿ ಗೆದ್ದಾಗಲೂ ಅವ್ರೇ ನಮ್ಮ ನಾಯಕರು ಅಂತಾ ಹೇಳಿದ್ದೆ. ಈಗಲೂ ಅದನ್ನೇ ಹೇಳ್ತಿದ್ದೇನೆ. ಪಕ್ಷ ಬದಲಾವಣೆ ಮಾಡಿದ್ರೂ ಅವ್ರೇ ನಮ್ಮ ಗುರುಗಳು ಅಂತಾ ತಿಳಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos